AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಕೃಷ್ಣ@ಜಿಮೇಲ್ ಡಾಟ್​ಕಾಮ್’ ಚಿತ್ರದ ಟ್ರೈಲರ್ ರಿಲೀಸ್; ಕತೆಯ ಗುಟ್ಟು ಬಿಟ್ಟುಕೊಡದೇ ಕುತೂಹಲ ಮೂಡಿಸಿದ ಟ್ರೈಲರ್

SriKrishna @gmail.com: ಡಾರ್ಲಿಂಗ್ ಕೃಷ್ಣ ಹಾಗೂ ಭಾವನಾ ಮೊದಲ ಬಾರಿಗೆ ಒಟ್ಟಾಗಿ ತೆರೆ ಹಂಚಿಕೊಂಡಿರುವ ಶ್ರೀ ಕೃಷ್ಣ @ ಜಿಮೇಲ್ ಡಾಟ್​ಕಾಮ್ ಚಿಇತ್ರದ ಡ್ರೈಲರ್ ಬಿಡುಗಡೆಯಾಗಿದೆ. ಚಿತ್ರವು ವಿಜಯದಶಮಿಯ ಸಂದರ್ಭದಲ್ಲಿ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.

‘ಶ್ರೀಕೃಷ್ಣ@ಜಿಮೇಲ್ ಡಾಟ್​ಕಾಮ್’ ಚಿತ್ರದ ಟ್ರೈಲರ್ ರಿಲೀಸ್; ಕತೆಯ ಗುಟ್ಟು ಬಿಟ್ಟುಕೊಡದೇ ಕುತೂಹಲ ಮೂಡಿಸಿದ ಟ್ರೈಲರ್
‘ಶ್ರೀ ಕೃಷ್ಣ @ಗಿಮೇಲ್ ಡಾಟ್ ಕಾಮ್’ ಚಿತ್ರದಲ್ಲಿ ಕೃಷ್ಣ, ಭಾವನಾ
Follow us
TV9 Web
| Updated By: shivaprasad.hs

Updated on:Oct 02, 2021 | 2:16 PM

ಡಾರ್ಲಿಂಗ್ ಕೃಷ್ಣ ನಾಯಕನಾಗಿ ಕಾಣಿಸಿಕೊಂಡಿರುವ ‘ಶ್ರೀಕೃಷ್ಣ @ಜಿಮೇಲ್ ಡಾಟ್ ಕಾಮ್’ ಚಿತ್ರದ ಟ್ರೈಲರ್ ಬಿಡಗಡೆಯಾಗಿದೆ. ಈಗಾಗಲೇ ವಿಭಿನ್ನ ಶೀರ್ಷಿಕೆಯ ಮುಖಾಂತರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಬಹುದೊಡ್ಡ ತಾರಾ ಬಳಗವೇ ಇದೆ. ಅದಕ್ಕೆ ತಕ್ಕಂತೆ, ಟ್ರೈಲರ್ ಕೂಡ ನಿರೀಕ್ಷೆ ಮೂಡಿಸುವಂತಿದ್ದು,  ಚಿತ್ರಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಚಿತ್ರದಲ್ಲಿ ಕೃಷ್ಣ ಅವರಿಗೆ ಭಾವನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ದತ್ತಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ಹಲವು ಕಲಾವಿದರು ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

‘ಮೈನಾ’, ‘ಸಂಜು ವೆಡ್ಸ್ ಗೀತಾ’ ಮೊದಲಾದ ಹಿಟ್ ಚಿತ್ರಗಳನ್ನು ನೀಡಿರುವ ನಾಗಶೇಖರ್, ಈ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ಈ ಚಿತ್ರ  ನಿರ್ಮಾಣವಾಗಿದ್ದು, ಜಯಣ್ಣ ಕಂಬೈನ್ಸ್ ಹಂಚಿಕೆಯ ಜವಾಬ್ದಾರಿ ಹೊತ್ತಿದೆ. ಅರ್ಜುನ್ ಜನ್ಯಾ ಸಂಗೀತವಿರುವ ಈ ಚಿತ್ರಕ್ಕೆ, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವು ಅಕ್ಟೋಬರ್ 15ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಟ್ರೈಲರ್ ಇಲ್ಲಿದೆ:

‘ಲವ್​ ಮಾಕ್ಟೇಲ್’ ಚಿತ್ರದ ಯಶಸ್ಸಿನಲ್ಲಿರುವ ಡಾರ್ಲಿಂಗ್ ಕೃಷ್ಣ, ಈ ಚಿತ್ರದ ಕುರಿತು ಬಹುದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಕೆಲವು ಹಾಡುಗಳು ಬಿಡುಗಡೆಯಾಗಿದ್ದು, ವೀಕ್ಷಕರ ಮನಗೆದ್ದಿದೆ. ಅದೇ ಮಾದರಿಯಲ್ಲಿ ಚಿತ್ರವೂ ವೀಕ್ಷಕರಿಗೆ ಪ್ರಿಯವಾಗುತ್ತದೆ ಎಂಬ ನಿರೀಕ್ಷೆಯಲ್ಲಿ ಚಿತ್ರತಂಡವಿದೆ. ಟ್ರೈಲರ್ ನೋಡಿದ ಚಿತ್ರ ಪ್ರೇಮಿಗಳು, ಪಾಸಿಟಿವ್ ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಿಜಯದಶಮಿಯಂದು ಚಿತ್ರವು ತೆರೆಗೆ ಬರುತ್ತಿದ್ದು, ಬೆಳ್ಳಿತೆರೆಯಲ್ಲಿ ಹೇಗೆ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

12 ಕೋಟಿ ರೂ. ಬಂಗಲೆ ಖರೀದಿಸಿದ ಪವನ್​ ಕಲ್ಯಾಣ್​; 6350 ಚದರ ಅಡಿ ಇರುವ ಐಷಾರಾಮಿ ಮನೆ

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಗೋಡೆ ಮೇಲೆ ಜೇಮ್ಸ್ ಬಾಂಡ್ 007 ಬರೆದು ಕಳ್ಳರು ಎಸ್ಕೇಪ್! ರಾಜಸ್ಥಾನದಲ್ಲಿ ನಾಲ್ವರ ಬಂಧಿಸಿದ ಮಾರ್ಕೆಟ್ ಪೊಲೀಸರು

Published On - 2:12 pm, Sat, 2 October 21

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?