AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಶಶಾಂಕ್​

Darling Krishna Birthday: ‘ಮೊಗ್ಗಿನ ಮನಸ್ಸು’ ಖ್ಯಾತಿಯ ನಿರ್ದೇಶಕ ಶಶಾಂಕ್​ ಅವರ ಜೊತೆ ಡಾರ್ಲಿಂಗ್​ ಕೃಷ್ಣ ಕೈ ಜೋಡಿಸಿದ್ದಾರೆ. ಇಬ್ಬರ ಕಾಂಬಿನೇಷನ್​ನ ಹೊಸ ಚಿತ್ರ ಅನೌನ್ಸ್​ ಆಗಿದೆ.

Darling Krishna: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಶಶಾಂಕ್​
ಶಶಾಂಕ್​, ಡಾರ್ಲಿಂಗ್​ ಕೃಷ್ಣ
TV9 Web
| Edited By: |

Updated on:Jun 12, 2022 | 11:39 AM

Share

ನಟ, ನಿರ್ದೇಶಕ ಡಾರ್ಲಿಂಗ್​ ಕೃಷ್ಣ (Darling Krishna) ಅವರಿಗೆ ಇಂದು (ಜೂನ್​ 12) ಜನ್ಮದಿನದ ಸಂಭ್ರಮ. ಕುಟುಂಬದವರ ಜೊತೆ ಅವರು ಈ ದಿನವನ್ನು ಎಂಜಾಯ್​ ಮಾಡುತ್ತಿದ್ದಾರೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಶುಭ ಕೋರುತ್ತಿದ್ದಾರೆ. ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ (Darling Krishna Birthday) ಪ್ರಯುಕ್ತ ನಿರ್ದೇಶಕ ಶಶಾಂಕ್​ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಶಶಾಂಕ್ (Director Shashank)​ ಅವರ ಬ್ಯಾನರ್​ ಮೂಲಕವೇ ಈ ಸಿನಿಮಾ ಮೂಡಿಬರಲಿದೆ ಎಂಬುದು ವಿಶೇಷ. ‘ಮೊಗ್ಗಿನ ಮನಸ್ಸು’, ‘ಕೃಷ್ಣನ್​ ಲವ್​ ಸ್ಟೋರಿ’, ‘ಕೃಷ್ಣ ಲೀಲಾ’ ಸಿನಿಮಾಗಳ ಮೂಲಕ ಭರ್ಜರಿ ಯಶಸ್ಸು ಕಂಡವರು ಶಶಾಂಕ್​. ಅಂಥ ನಿರ್ದೇಶಕರ ಜೊತೆ ಡಾರ್ಲಿಂಗ್​ ಕೃಷ್ಣ ಕೈ ಜೋಡಿಸುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಲವ್​ ಮಾಕ್ಟೇಲ್​’ ಸಿನಿಮಾ ಮೂಲಕ ನಿರ್ದೇಶಕನಾಗಿಯೂ ಡಾರ್ಲಿಂಗ್​ ಕೃಷ್ಣ ಯಶಸ್ಸು ಕಂಡರು. ಅದರ ಸೀಕ್ವೆಲ್​ ಆಗಿ ಬಂದ ‘ಲವ್​ ಮಾಕ್ಟೇಲ್​ 2’ ಕೂಡ ಸೂಪರ್​ ಹಿಟ್​ ಆಯಿತು. ಈ ಗೆಲುವಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಆ ಪೈಕಿ ನಿರ್ದೇಶಕ ಶಶಾಂಕ್​ ಜೊತೆಗಿನ ಸಿನಿಮಾ ಬಗ್ಗೆ ಹೆಚ್ಚು ಕೌತುಕ ಮೂಡಿದೆ.

ಇದನ್ನೂ ಓದಿ
Image
ಆ್ಯಕ್ಷನ್​ ಅವತಾರದಲ್ಲಿ ಡಾರ್ಲಿಂಗ್​ ಕೃಷ್ಣ: ಇಲ್ಲಿದೆ ‘ದಿಲ್​ ಪಸಂದ್​’ ಸಿನಿಮಾದ ಮೇಕಿಂಗ್​ ವಿಡಿಯೋ
Image
‘ಎರಡು ಸಿನಿಮಾ ಹಿಟ್​ ಆದ್ಮೇಲೆ, ಡೈರೆಕ್ಟರ್​ ಬಗ್ಗೆ ಮಾತನಾಡೋಕೆ ಆಗಲ್ಲ’; ಡಾರ್ಲಿಂಗ್​ ಕೃಷ್ಣ ಬಗ್ಗೆ ಮಿಲನಾ ಮಾತು
Image
‘ಲವ್​ ಮಾಕ್ಟೇಲ್​ 3’ ಕೂಡ ಬರುತ್ತಾ? ಗೆದ್ದ ಖುಷಿಯಲ್ಲಿ ಡಾರ್ಲಿಂಗ್​ ಕೃಷ್ಣ ನೀಡಿದ ಉತ್ತರ ಇಲ್ಲಿದೆ..
Image
ಮದುವೆ ಬಳಿಕ ಹೇಗಿದೆ ಮಿಲನಾ-ಡಾರ್ಲಿಂಗ್​ ಕೃಷ್ಣ ದಂಪತಿಯ ಸಿನಿಮಾ ಜರ್ನಿ ಮತ್ತು ಜೀವನ?

ಸದ್ಯ ಈ ಚಿತ್ರಕ್ಕೆ ಶೀರ್ಷಿಕೆ ಅನೌನ್ಸ್​ ಆಗಿಲ್ಲ. ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಚಿತ್ರದ ಬಗ್ಗೆ ಸುದ್ದಿ ನೀಡಲು ಶಶಾಂಕ್ ಹಂಚಿಕೊಂಡಿರುವ ಪೋಸ್ಟರ್​ನಲ್ಲಿ ಇರುವ ‘ಟೇಲ್​ ಆಫ್​ ರಿಯಲ್​ ಮ್ಯಾನ್​’ ಎಂಬ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:39 am, Sun, 12 June 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್