AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Birthday: ಡಾರ್ಲಿಂಗ್​ ಕೃಷ್ಣ ಜನ್ಮದಿನ; ಹೀರೋ ಆಗಿ 10 ವರ್ಷ: 2 ವಿಶೇಷ ಕಾರಣಗಳಿಗೆ ಶುಭ ಕೋರಿದ ಮಿಲನಾ ನಾಗರಾಜ್​

ಮಿಲನಾ ನಾಗರಾಜ್​ ಹಂಚಿಕೊಂಡಿರುವ ಫೋಟೋದ ಹಿನ್ನೆಲೆಯಲ್ಲಿ ಡಾರ್ಲಿಂಗ್​ ಕೃಷ್ಣ ನಟಿಸಿದ ಹಲವು ಸಿನಿಮಾಗಳ ಪೋಸ್ಟರ್​ ಇದೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

Darling Krishna Birthday: ಡಾರ್ಲಿಂಗ್​ ಕೃಷ್ಣ ಜನ್ಮದಿನ; ಹೀರೋ ಆಗಿ 10 ವರ್ಷ: 2 ವಿಶೇಷ ಕಾರಣಗಳಿಗೆ ಶುಭ ಕೋರಿದ ಮಿಲನಾ ನಾಗರಾಜ್​
ಡಾರ್ಲಿಂಗ್​ ಕೃಷ್ಣ
ಮದನ್​ ಕುಮಾರ್​
|

Updated on: Jun 12, 2023 | 10:42 AM

Share

ನಟ ಡಾರ್ಲಿಂಗ್​ ಕೃಷ್ಣ (Darling Krishna) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಲವ್ ಮಾಕ್ಟೇಲ್​’ ಸಿನಿಮಾದಿಂದ ಅವರಿಗೆ ಸಿಕ್ಕ ಗೆಲುವು ದೊಡ್ಡದು. ಇಂದು (ಜೂನ್​ 12) ಡಾರ್ಲಿಂಗ್​ ಕೃಷ್ಣ ಅವರಿಗೆ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ಅವರ ಪತ್ನಿ ಮಿಲನಾ ನಾಗರಾಜ್​ (Milana Nagaraj) ಶುಭಾಶಯ ತಿಳಿಸಿದ್ದಾರೆ. ಅವರು ಸಂಭ್ರಮಿಸಲು ಇನ್ನೊಂದು ಕಾರಣ ಕೂಡ ಇದೆ. ಡಾರ್ಲಿಂಗ್​ ಕೃಷ್ಣ ಅವರು ಹೀರೋ ಆಗಿ 10 ವರ್ಷ ಕಳೆದಿದೆ. ಸ್ಯಾಂಡಲ್​ವುಡ್​ನಲ್ಲಿ ಅವರು ಸಾಗಿ ಬಂದ ಹಾದಿಯನ್ನು ಮೆಲುಕು ಹಾಕಲಾಗುತ್ತಿದೆ. ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಡಾರ್ಲಿಂಗ್​ ಕೃಷ್ಣಗೆ ಹುಟ್ಟುಹಬ್ಬದ (Darling Krishna Birthday) ಶುಭಾಶಯ ಮತ್ತು ಅಭಿನಂದನೆ ತಿಳಿಸುತ್ತಿದ್ದಾರೆ.

ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್​ ಕೃಷ್ಣ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರಿಬ್ಬರು ತಮ್ಮ ಲವ್​ ಸ್ಟೋರಿ ಬಹಿರಂಗ ಪಡಿಸಿದರು. 2021ರಲ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸಿನಿಮಾದಲ್ಲೂ, ರಿಯಲ್​ ಲೈಫ್​ನಲ್ಲೂ ಅವರಿಬ್ಬರ ಜೋಡಿ ಎಂದರೆ ಅಭಿಮಾನಿಗಳಿಗೆ ತುಂಬ ಇಷ್ಟ. ಹಲವು ಚಿತ್ರಗಳಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದ್ದಾರೆ.

‘ನನ್ನ ಡಾರ್ಲಿಂಗ್​ಗೆ ಹ್ಯಾಪಿ ಬರ್ತ್​ಡೇ. ಒಂದು ಅಸಾಧಾರಣವಾದ ಪಯಣ ಮತ್ತು 10 ವರ್ಷ ಅನ್ನೋದು ಆರಂಭ ಅಷ್ಟೇ. ಯಶಸ್ಸು ಮತ್ತು ಸೋಲನ್ನು ನೀವು ಚೆನ್ನಾಗಿ ನಿಭಾಯಿಸುತ್ತೀರಿ. ನಾನು ಭೇಟಿ ಆದಾಗಿನಿಂದ ಈ 10 ವರ್ಷಗಳಲ್ಲಿ ನೀವು ಅದೇ ರೀತಿ ಇದ್ದೀರಿ. ಪರಿಶ್ರಮದಿಂದ ನೀವು ಲಕ್ಷಾಂತರ ಹೃದಯಗಳನ್ನು ಗೆಲ್ಲುವಂತಾಗಲಿ. ನಿಮ್ಮ ಬದ್ಧತೆ ನಮಗೆ ಸ್ಫೂರ್ತಿ ನೀಡುತ್ತದೆ. ನಿಮ್ಮ ಸಿನಿಮಾ ಪಯಣದಲ್ಲಿ ಮತ್ತು ಜೀವನದ ಭಾಗವಾಗಿ ನಾನು ಇರುವುದಕ್ಕೆ ಖುಷಿ ಆಗುತ್ತದೆ. ನಿಮ್ಮ ನಿರ್ದೇಶನದ ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದೇನೆ’ ಎಂದು ಮಿಲನಾ ನಾಗರಾಜ್​ ಪೋಸ್ಟ್​ ಮಾಡಿದ್ದಾರೆ.

ಮಿಲನಾ ನಾಗರಾಜ್​ ಮಾಡಿದ ಈ ಪೋಸ್ಟ್​ಗೆ ಡಾರ್ಲಿಂಗ್​ ಕೃಷ್ಣ ಅವರು ಬಹಳ ಕ್ಯೂಟ್​ ಆಗಿ ಪ್ರತಿಕ್ರಿಯಿಸಿದ್ದಾರೆ. ‘ಧನ್ಯವಾದಗಳು ಬೇಬು. ತಡವಾಗಿ ರಿಪ್ಲೆ ಮಾಡಿದ್ದಕ್ಕೆ ಕ್ಷಮೆ ಇರಲಿ. ಇದನ್ನು ನಾನು ಈಗ ನೋಡಿದೆ. ಲವ್​ ಯೂ’ ಎಂದು ಅವರು ಕಮೆಂಟ್​ ಮಾಡಿದ್ದಾರೆ. ಮಿಲನಾ ಹಂಚಿಕೊಂಡಿರುವ ಫೋಟೋದ ಹಿನ್ನೆಲೆಯಲ್ಲಿ ಡಾರ್ಲಿಂಗ್​ ಕೃಷ್ಣ ನಟಿಸಿದ ಹಲವು ಸಿನಿಮಾಗಳ ಪೋಸ್ಟರ್​ ಇದೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ಇದನ್ನೂ ಓದಿ: Love Mocktail 3: ‘ಲವ್​ ಮಾಕ್ಟೇಲ್​ 3’ ಕೆಲಸ ಆರಂಭಿಸಿದ ಡಾರ್ಲಿಂಗ್​ ಕೃಷ್ಣ; ಮುಂದುವರಿಯಲಿದೆ ಆದಿ-ನಿಧಿ ಕಥೆ

2010ರಲ್ಲೇ ನಟನಾಗಿ ಡಾರ್ಲಿಂಗ್​ ಕೃಷ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆದರೆ ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ‘ಮದರಂಗಿ’ 2013ರ ಮೇ 10ರಂದು ಬಿಡುಗಡೆ ಆಯಿತು. 2023ರ ಮೇ ತಿಂಗಳಲ್ಲಿ ಅವರು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ನಟನಾಗಿದ್ದ ಡಾರ್ಲಿಂಗ್​ ಕೃಷ್ಣ ಅವರು 2020ರಲ್ಲಿ ‘ಲವ್​ ಮಾಕ್ಟೇಲ್​’ ಸಿನಿಮಾದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರ ದೊಡ್ಡ ಹಿಟ್​ ಆಯಿತು. ಅದಕ್ಕೆ ಸೀಕ್ವೆಲ್​ ಆಗಿ ಮೂಡಿಬಂದ ‘ಲವ್​ ಮಾಕ್ಟೇಲ್​ 2’ ಸಿನಿಮಾ ಕೂಡ ಜನಮೆಚ್ಚುಗೆ ಪಡೆದುಕೊಂಡರು. ಈಗ ‘ಲವ್​ ಮಾಕ್ಟೇಲ್​ 3’ ಕೂಡ ಸಿದ್ಧವಾಗುತ್ತಿದೆ. ಡಾರ್ಲಿಂಗ್​ ಕೃಷ್ಣ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು