AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಸಿಗುತ್ತಿದೆ ‘ಶುಗರ್ ಫ್ಯಾಕ್ಟರಿ’ ಟೀಸರ್

ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ'ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಸಿಗುತ್ತಿದೆ ‘ಶುಗರ್ ಫ್ಯಾಕ್ಟರಿ’ ಟೀಸರ್
ಡಾರ್ಲಿಂಗ್ ಕೃಷ್ಣ- ಸೋನಲ್​
ರಾಜೇಶ್ ದುಗ್ಗುಮನೆ
|

Updated on:Jun 03, 2021 | 7:11 PM

Share

ನಟ-ನಟಿಯರ ಜನ್ಮದಿನಕ್ಕೆ ಚಿತ್ರತಂಡದಿಂದ ಟೀಸರ್​, ಪೋಸ್ಟರ್​ ಅಥವಾ ಟ್ರೇಲರ್​ ರಿಲೀಸ್​ ಆಗೋದು ಸಾಮಾನ್ಯ. ಈಗ ಜೂನ್​ 12ರಂದು ನಟ ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್ ನಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಜೂನ್ 11ರಂದು ಸಂಜೆ 5 ಗಂಟೆಗೆ ಇನ್​​ಸ್ಟಾಗ್ರಾಂ ಮೂಲಕ ಲೈವ್​ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ.

ಈಗಾಗಲೇ ಬಹತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ. ಡಾರ್ಲಿಂಗ್​ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಲ್​ ಮೊಂತೆರೋ, ಅದ್ವಿತಿ ಶೆಟ್ಟಿ ಹಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

Darling Krishna

ಡಾರ್ಲಿಂಗ್ ಕೃಷ್ಣ- ಸೋನಲ್​

ಡಾರ್ಲಿಂಗ್​ ಕೃಷ್ಣ ನಿರ್ದೇಶನ ಮಾಡಿ, ನಟಿಸಿದ್ದ ಲವ್​ ಮಾಕ್ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. 2020ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾ ನಂತರದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಸಾಕಷ್ಟು ಆಫರ್​ಗಳು ಬಂದಿದ್ದವು.

ಇದನ್ನೂ ಓದಿ: ‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು

Published On - 7:09 pm, Thu, 3 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?