AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

Darlig Krishna: ಡಾರ್ಲಿಂಗ್ ಕೃಷ್ಣ ನಟನೆಯ 'ಲವ್ ಮಾಕ್ಟೇಲ್ 3' ಸಿನಿಮಾ ಕಥೆ ಕದ್ದ ಆರೋಪ ಎದುರಿಸುತ್ತಿದೆ. ನಿರ್ದೇಶಕ ರಾಘವೇಂದ್ರ ನಾಯ್ಕ್, ಇದು ತಮ್ಮ ಕಥೆ ಎಂದು ದೂರಿದ್ದಾರೆ. ಈ ಆರೋಪಕ್ಕೆ ಕೃಷ್ಣ ಖಾರವಾಗಿ ಉತ್ತರಿಸಿದ್ದು, "ಕೋರ್ಟ್ ಪೇಟೆಂಟ್ ತೆಗೆದುಕೊಂಡಿದ್ದೀರಾ?" ಎಂದು ಪ್ರಶ್ನಿಸಿದ್ದಾರೆ.

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ
ಕೃಷ್ಣ-ರಾಘವೇಂದ್ರ
ರಾಜೇಶ್ ದುಗ್ಗುಮನೆ
|

Updated on: Mar 25, 2026 | 9:58 AM

Share

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ.

ರಾಘವೇಂದ್ರ ನಾಯ್ಕ್ ಅವರು ಮೊದಲು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡರು. ಈ ವೇಳೆ ಅವರು ಸಿನಿಮಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ‘ಇತ್ತೀಚೇಗೆ ಹಿಟ್ ಆದ ಚಿತ್ರವೊಂದು’ ಎಂದು ಉಲ್ಲೇಖಿಸಿ ಆರೋಪಿಸಿದರು. ಆ ಬಳಿಕ ಮಾಧ್ಯಮಗಳ ಎದುರು ಬಂದು ಈ ಕುರಿತು ನೇರ ಆರೋಪ ಮಾಡಲು ಆರಂಭಿಸಿದರು. ಈ ವಿಷಯದ ಕುರಿತು ಕೃಷ್ಣ ತಿರುಗೇಟು ನೀಡಿದ್ದಾರೆ. ಈ ಆರೋಪವನ್ನು ಜೋಕ್ ಎಂದು ಕರೆದಿದ್ದಾರೆ.

View this post on Instagram

A post shared by NewsO NewsU (@newsonewsu)

ನ್ಯೂಸೋ ನ್ಯೂಸು ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೃಷ್ಣ ಹಾಗೂ ಮಿಲನಾ, ‘ಅವರ ಆರೋಪವೇ ಒಂದು ಜೋಕ್. ನಿಮ್ಮ ಬಳಿ ಸ್ಕ್ರೀನ್​​ಪ್ಲೇ ಇದೆಯಾ? ಬರೆದಿಟ್ಟುಕೊಂಡ ಡೈಲಾಗ್ ಇದೆಯಾ? ಈ ಪ್ರಶ್ನೆಗಳಿಗೆ ಇಲ್ಲ ಎನ್ನುತ್ತಾರೆ. ಸೆಕೆಂಡ್ ಹಾಫ್ ಕೋರ್ಟ್ ಅಲ್ಲಿ ನಡೆಯುತ್ತದೆ, ಅದಕ್ಕೆ ಹೋಲಿಕೆ ಇದೆ ಎನ್ನುತ್ತಾರೆ. ಕೋರ್ಟ್​ ಪೇಟೆಂಟ್ ತೆಗೆದುಕೊಂಡಿದ್ದೀರಾ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

‘ಸೋಶಿಯಲ್ ಮೀಡಿಯಾದಲ್ಲಿ ಒಂದು ಕಡೆ ‘ಕದ್ದು ಮಾಡಿದ ಸಿನಿಮಾ’ ಎಂದು ಕಮೆಂಟ್ ನೋಡಿದೆ. ಇದನ್ನು ನೋಡಿದ್ರೆ ಬೇಸರ ಆಗುತ್ತೆ. ಇದನ್ನು ಕದ್ದು ಮಾಡಿದ್ದಲ್ಲ. ನಾವು ಕುಳಿತು ಮಾಡಿದ್ದು’ ಎಂದರು ಕೃಷ್ಣ.‘ಇದು ಹಾಸ್ಯದ ರೀತಿ ಕಾಣಿಸುತ್ತದೆ’ ಎಂದಿದ್ದಾರೆ ಮಿಲನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ