ಪತ್ನಿ ಮಿಲನಾ ಹೊಡೆದರೆ ನನ್ನ ಸಿನಿಮಾ ಹಿಟ್ ಆಗುತ್ತೆ: ಡಾರ್ಲಿಂಗ್ ಕೃಷ್ಣ

Kausalya Supraja Rama: ಡಾರ್ಲಿಂಗ್ ಕೃಷ್ಣ ನಟನೆಯ ಕೌಸಲ್ಯ ಸುಪ್ರಜಾ ರಾಮ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪತ್ನಿ ಮಿಲನಾ ಹೊಡೆದರೆ ನನ್ನ ಸಿನಿಮಾ ಹಿಟ್ ಆಗುತ್ತೆ: ಡಾರ್ಲಿಂಗ್ ಕೃಷ್ಣ
ಡಾರ್ಲಿಂಗ್ ಕೃಷ್ಣ
Follow us
|

Updated on: Jul 28, 2023 | 10:44 PM

ಡಾರ್ಲಿಂಗ್ ಕೃಷ್ಣ (Darling Krishna), ಬೃಂದಾ ಆಚಾರ್ಯ (Brinda Acharya), ಮಿಲನಾ ನಾಗರಾಜ್ (Milana Nagaraj) ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಇಂದು (ಜುಲೈ 28) ಬಿಡುಗಡೆ ಆಗಿದೆ. ಪವನ್ ಕಲ್ಯಾಣ್​ರ ‘ಬ್ರೋ’ ಸಿನಿಮಾದ ಅಬ್ಬರದ ನಡುವೆಯೂ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಪ್ರೇಕ್ಷಕರನ್ನು ಸೆಳೆಯಲು ಯಶಸ್ವಿಯಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರೂ ಸಹ ಸಿನಿಮಾದ ಬಗ್ಗೆ, ಸಿನಿಮಾ ನೀಡುತ್ತಿರುವ ಸಂದೇಶದ ಬಗ್ಗೆ ಖುಷಿ ವ್ಯಕ್ತಪಡಿಸಿರುವುದು ಚಿತ್ರತಂಡದ ಜೋಷ್ ಹೆಚ್ಚಿಸಿದೆ. ಸಿನಿಮಾಕ್ಕೆ ಉತ್ತಮ ಆರಂಭ ಸಿಕ್ಕ ಖುಷಿಯನ್ನು ಡಾರ್ಲಿಂಗ್ ಕೃಷ್ಣ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ.

”ಇದು ನನ್ನ ಕರಿಯರ್​ನಲ್ಲಿಯೇ ಬೆಸ್ಟ್ ಸಿನಿಮಾ. ಭಿನ್ನವಾದ ಸಂದೇಶವನ್ನು ನಾವು ಸಿನಿಮಾದಲ್ಲಿ ನೀಡಿದ್ದೀವಿ. ಸಿನಿಮಾ ನೋಡುತ್ತಿರುವವರು ಎರಡನೇ ಅರ್ಧದಲ್ಲಿ ಬಹಳ ಎಮೋಷನಲ್ ಆಗುತ್ತಿದ್ದುದನ್ನು ನಾನು ಗಮನಿಸಿದೆ. ಸಿನಿಮಾ ನೋಡುವವರನ್ನು ಭಾವುಕರನ್ನಾಗಿಸುವಂಥಹಾ ಕತೆಯನ್ನು ನಾವು ಹೇಳಿದ್ದೇವೆ. ಈ ರೀತಿಯ ಸಿನಿಮಾವನ್ನು ನಾವು ಈ ಹಿಂದಿನ ವರೆಗೆ ನಾನು ಮಾಡಿರಲಿಲ್ಲ” ಎಂದಿದ್ದಾರೆ ಡಾರ್ಲಿಂಗ್ ಕೃಷ್ಣ.

ಸಿನಿಮಾದಲ್ಲಿ ಮಿಲನಾ ನಾಗರಾಜ್ ಸಹ ನಟಿಸಿದ್ದು, ಲವ್ ಮಾಕ್ಟೆಲ್ ಸಿನಿಮಾದಲ್ಲಿ ಮಿಲನಾ, ನನ್ನನ್ನು ಒದ್ದಿದ್ದರು, ಈ ಸಿನಿಮಾದಲ್ಲಿ ಹೊಡೆದಿದ್ದಾರೆ. ಅವರು ನನ್ನನ್ನು ಹೊಡೆದರೆ ಅಥವಾ ಒದ್ದರೆ ಆ ಸಿನಿಮಾ ಸೂಪರ್ ಹಿಟ್ ಆಗುತ್ತೆ. ಅದು ಈ ಸಿನಿಮಾ ಮೂಲಕವೂ ಮುಂದುವರೆಯಲಿದೆ ಎಂದಿದ್ದಾರೆ.

ಇದನ್ನೂ ಓದಿ:ತಾರಾ ಜೋಡಿಯಾಗಿ ತಾವೆದುರಿಸುತ್ತಿರುವ ಸಮಸ್ಯೆಯ ಬಗ್ಗೆ ನಟಿ ಮಿಲನಾ ನಾಗರಾಜ್ ಬಿಚ್ಚು ಮಾತು

ಸಿನಿಮಾ ಬಗ್ಗೆ ಮಾತು ಹೊರಳಿಸಿದ ಡಾರ್ಲಿಂಗ್ ಕೃಷ್ಣ, ಈ ಸಿನಿಮಾ ಕಾಲೇಜು ವಿದ್ಯಾರ್ಥಿಗಳಿಗೆ, ಮಾಸ್ ಆಡಿಯನ್ಸ್​ಗೆ ಕುಟುಂಬ ಪ್ರೇಕ್ಷಕರು ಎಲ್ಲರಿಗೂ ಇಷ್ಟವಾಗುತ್ತದೆ. ಮೊದಲನೇ ಅರ್ಧದಲ್ಲಿ ನನ್ನ ಪಾತ್ರವನ್ನು ಇಷ್ಟ ಪಡದ ಜನರೇ ಆ ನಂತರ ಆ ಪಾತ್ರ ಬದಲಾಗುವ ರೀತಿ ನೋಡಿ ಖುಷಿ ಪಡುತ್ತಾರೆ. ಮೊದಲಾರ್ಧದಲ್ಲಿರುವ ನನ್ನ ರಗಡ್ ಲುಕ್​ನ ಪಾತ್ರವೂ ಹಲವರಿಗೆ ಇಷ್ಟವಾಗಲಿದೆ” ಎಂದಿದ್ದಾರೆ ಕೃಷ್ಣ.

ಸಿನಿಮಾದಲ್ಲಿ ತಂದೆ-ಮಗನ ಸಂಬಂಧ, ತಾಯಿ-ಮಗನ ಸಂಬಂಧ, ಗಂಡ-ಹೆಂಡತಿ, ಗೆಳೆಯರ ಸಂಬಂಧ ಹೀಗೆ ಹಲವು ಕೋನಗಳಲ್ಲಿ ನಾವು ಕತೆಯನ್ನು ಹೇಳಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ನಾವು ಹೇಳಲು ಹೊರಟಿರುವ ವಿಷಯ ಸಹ ಎಲ್ಲರಿಗೂ ತಟ್ಟುವಂಥಹದ್ದು, ಸಮಾಜದಲ್ಲಿ, ಪ್ರತಿ ಮನೆಯಲ್ಲಿಯೂ ಇರುವಂಥಹದ್ದು ಹಾಗಾಗಿ ಈ ಸಿನಿಮಾ ಹೆಚ್ಚಿನ ಜನರಿಗೆ ಇಷ್ಟವಾಗುತ್ತದೆ, ಅರ್ಥವಾಗುತ್ತದೆ ಎಂದಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಗಂಡಸಿನ ಅಹಂ ಕುರಿತ ಕತೆಯನ್ನು ನಿರ್ದೇಶಕ ಶಶಾಂಕ್ ಹೇಳಿದ್ದಾರೆ. ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ, ಬೃಂದಾ, ಮಿಲನಾ, ನಾಗಭೂಷಣ್, ಸುಧಾ ಬೆಳವಾಡಿ, ರಂಗಾಯಣ ರಘು ಇನ್ನಿತರರು ನಟಿಸಿದ್ದಾರೆ. ಸಿನಿಮಾ ಜುಲೈ 28ಕ್ಕೆ ತೆರೆಗೆ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ