AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ಚಿತ್ರಗಳ ಜೊತೆ ಡಾರ್ಲಿಂಗ್​ ಕೃಷ್ಣ ಪೈಪೋಟಿ: ಅ.15ಕ್ಕೆ ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​ ಬಿಡುಗಡೆ

ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ಮೆನನ್​ ಜೋಡಿಯ ‘ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್’ ಚಿತ್ರ ವಿಜಯದಶಮಿ ಹಬ್ಬದ ಪ್ರಯುಕ್ತ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ನಾಗಶೇಖರ್​ ನಿರ್ದೇಶನ ಮಾಡಿದ್ದಾರೆ.

ಸ್ಟಾರ್​ ಚಿತ್ರಗಳ ಜೊತೆ ಡಾರ್ಲಿಂಗ್​ ಕೃಷ್ಣ ಪೈಪೋಟಿ: ಅ.15ಕ್ಕೆ ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​ ಬಿಡುಗಡೆ
ಭಾವನಾ ಮೆನನ್​, ಡಾರ್ಲಿಂಗ್​ ಕೃಷ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Oct 12, 2021 | 12:01 PM

ಚಿತ್ರಮಂದಿರಗಳಲ್ಲಿ ಶೇ.100 ಆಸನ ಭರ್ತಿಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅನೇಕ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​ ಆಗುತ್ತಿವೆ. ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರ ಅ.14ರಂದು ಬಿಡುಗಡೆ ಆಗುತ್ತಿವೆ. ಅದರ ಮರುದಿನವೇ, ಅಂದರೆ ಅ.15ರಂದು ಡಾರ್ಲಿಂಗ್​ ಕೃಷ್ಣ ನಟನೆ ‘ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ಕೃಷ್ಣಗೆ ಜೋಡಿಯಾಗಿ ಭಾವನಾ ಮೆನನ್​ ನಟಿಸಿದ್ದಾರೆ. ಖ್ಯಾತ ನಿರ್ದೇಶನ ನಾಗಶೇಖರ್​ ಆ್ಯಕ್ಷನ್​-ಕಟ್​ ಹೇಳಿದ್ದು, ಸಂದೇಶ್​ ನಾಗರಾಜ್​ ಬಂಡವಾಳ ಹೂಡಿದ್ದಾರೆ.

ಶೇ.50ರಷ್ಟು ಆಸನ ಭರ್ತಿ ಮಿತಿ ಇದ್ದಾಗಲೇ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕ ಸಂದೇಶ್​ ನಾಗರಾಜ್​ ಸಿದ್ಧರಿದ್ದರು. ಈಗ ಶೇ.100ರಷ್ಟು ಆಕ್ಯುಪೆನ್ಸಿಗೆ ಅವಕಾಶ ಸಿಕ್ಕಿರುವುದು ಅವರಿಗೆ ಖುಷಿ ನೀಡಿದೆ. ‘ದಸರಾಗೆ ಸಾಲುಸಾಲು ರಜೆ ಇದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರಲು ಅನುಕೂಲವಾಗುತ್ತದೆ. ಈ ವೇಳೆ ಇನ್ನೂ ಎರಡು ಚಿತ್ರಗಳು ಬಿಡುಗಡೆ ಆಗುತ್ತಿವೆ. ಎಲ್ಲಾ ಚಿತ್ರಗಳಿಗೂ ಒಳ್ಳೆಯದಾಗಲಿ’ ಎನ್ನುತ್ತಾರೆ ಸಂದೇಶ್ ನಾಗರಾಜ್.

ಈ ಚಿತ್ರದಲ್ಲಿ ಹಿರಿಯ ನಟ ದತ್ತಣ್ಣ ಜೊತೆ ಅನೇಕ ದೃಶ್ಯಗಳಲ್ಲಿ

ನಟಿಸುವ ಅವಕಾಶ ಕೃಷ್ಣ ಅವರಿಗೆ ಸಿಕ್ಕಿತು. ಅದು ಅವರಿಗೆ ಹೆಚ್ಚು ಖುಷಿ ನೀಡಿದೆ. ‘ನಾಗಶೇಖರ್ ಅವರ ನಿರ್ದೇಶನ ಅಂದ ಮೇಲೆ ಕಥೆ, ಹಾಡುಗಳು ಎಲ್ಲಾ ಚೆನ್ನಾಗಿರುತ್ತವೆ. ಈ ಚಿತ್ರ ಕೂಡ ತುಂಬಾ ಚೆನ್ನಾಗಿದೆ. ದತ್ತಣ್ಣ ಅವರಂತಹ ಹಿರಿಯರೊಂದಿಗೆ ನಟಿಸಿದ್ದು ಮರೆಯಲಾಗದ ಅನುಭವ. ನನ್ನೊಂದಿಗೆ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಸೊಗಸಾಗಿದೆ’ ಎಂಬುದು ಡಾರ್ಲಿಂಗ್ ಕೃಷ್ಣ ಮಾತುಗಳು.

ಈ ಚಿತ್ರದಲ್ಲಿ ರಿಷಬ್​​ ಶೆಟ್ಟಿ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ತಾವು ಹೀರೋ ಆಗಿದ್ದರೂ ಕೂಡ ಇದರಲ್ಲಿ ಪೋಷಕ ಮಾತ್ರ ನಿಭಾಯಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಶೇಖರ್​, ‘ಈ ಸಿನಿಮಾದಲ್ಲಿ ವಿಭಿನ್ನವಾದ ಕಥೆ ಇದೆ. ನಾನು ಮತ್ತು ಪ್ರೀತಂ ಗುಬ್ಬಿ ಚಿತ್ರಕಥೆ ಬರೆದಿದ್ದೇವೆ. ಸುಮಾರು 150ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್, ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದಿದ್ದಾರೆ.

ಬೃಂದಾ ಎನ್. ಜಯರಾಂ ಅವರು ಈ ಚಿತ್ರದ ಸಹ ನಿರ್ಮಾಪಕರು. ಚಂದನ್ ಗೌಡ ದ್ವಿತೀಯ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಸಾಧುಕೋಕಿಲ, ಅಚ್ಯುತ್​ ಕುಮಾರ್​, ಸಾತ್ವಿಕ್ ಮುಂತಾದವರು ನಟಿಸಿದ್ದಾರೆ. ಐದು ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ, ಅರುಣ್ ಸಾಗರ್ ಕಲಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

ಶಿವಣ್ಣನಿಗೆ ಅಪ್ಪು ನಿರ್ದೇಶನ, ಉಪ್ಪಿ ಅಸಿಸ್ಟೆಂಟ್​​ ಡೈರೆಕ್ಟರ್​, ಸಂತೋಷ್​ ಆನಂದ್​ರಾಮ್​ ಡೈಲಾಗ್​ ರೈಟರ್

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ