AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna: ಡಾರ್ಲಿಂಗ್​ ಕೃಷ್ಣ ಬರ್ತ್​​ಡೇಗೆ ರಿಲೀಸ್ ಆದ ‘ಶುಗರ್​ ಫ್ಯಾಕ್ಟರಿ’ ಟೀಸರ್​ ನೋಡಿದ್ರಾ?

Sugar Factory Teaser: ಟೀಸರ್​ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ.

Darling Krishna: ಡಾರ್ಲಿಂಗ್​ ಕೃಷ್ಣ ಬರ್ತ್​​ಡೇಗೆ ರಿಲೀಸ್ ಆದ ‘ಶುಗರ್​ ಫ್ಯಾಕ್ಟರಿ’ ಟೀಸರ್​ ನೋಡಿದ್ರಾ?
ಡಾರ್ಲಿಂಗ್ ಕೃಷ್ಣ- ಸೋನಲ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 12, 2021 | 3:49 PM

Share

ಲವ್​ ಮಾಕ್​ಟೇಲ್​ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಡಾರ್ಲಿಂಗ್​ ಕೃಷ್ಣ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಇಂದು ಅವರ ಬರ್ತ್​ಡೇ ಹಿನ್ನೆಲೆಯಲ್ಲಿ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಟೀಸರ್​ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ. ಇಡೀ ಟೀಸರ್​ ಕೇವಲ ಒಂದು ದೃಶ್ಯಕ್ಕೆ ಮಾತ್ರ ಸೀಮಿತವಾಗಿದ್ದು, ಅಭಿಮಾನಿಗಳಿಗೆ ಕೊಂಚ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಗುವ ನಿರೀಕ್ಷೆ ಅಭಿಮಾನಿಗಳದ್ದು.

‘ಶುಗರ್ ಫ್ಯಾಕ್ಟರಿ’ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಉಳಿದ ಭಾಗದ ಶೂಟಿಂಗ್​ ನಡೆಸುವ ಆಲೋಚನೆ ಚಿತ್ರತಂಡದ್ದು. ಡಾರ್ಲಿಂಗ್​ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಲ್​ ಮೊಂತೆರೋ, ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

ಡಾರ್ಲಿಂಗ್​ ಕೃಷ್ಣ ನಿರ್ದೇಶನ ಮಾಡಿ, ನಟಿಸಿದ್ದ ಲವ್​ ಮಾಕ್ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. 2020ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾ ನಂತರದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ.

ಇದನ್ನೂ ಓದಿ: Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್