AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna: ಡಾರ್ಲಿಂಗ್​ ಕೃಷ್ಣ ಬರ್ತ್​​ಡೇಗೆ ರಿಲೀಸ್ ಆದ ‘ಶುಗರ್​ ಫ್ಯಾಕ್ಟರಿ’ ಟೀಸರ್​ ನೋಡಿದ್ರಾ?

Sugar Factory Teaser: ಟೀಸರ್​ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ.

Darling Krishna: ಡಾರ್ಲಿಂಗ್​ ಕೃಷ್ಣ ಬರ್ತ್​​ಡೇಗೆ ರಿಲೀಸ್ ಆದ ‘ಶುಗರ್​ ಫ್ಯಾಕ್ಟರಿ’ ಟೀಸರ್​ ನೋಡಿದ್ರಾ?
ಡಾರ್ಲಿಂಗ್ ಕೃಷ್ಣ- ಸೋನಲ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 12, 2021 | 3:49 PM

Share

ಲವ್​ ಮಾಕ್​ಟೇಲ್​ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಡಾರ್ಲಿಂಗ್​ ಕೃಷ್ಣ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಇಂದು ಅವರ ಬರ್ತ್​ಡೇ ಹಿನ್ನೆಲೆಯಲ್ಲಿ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಟೀಸರ್​ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ. ಇಡೀ ಟೀಸರ್​ ಕೇವಲ ಒಂದು ದೃಶ್ಯಕ್ಕೆ ಮಾತ್ರ ಸೀಮಿತವಾಗಿದ್ದು, ಅಭಿಮಾನಿಗಳಿಗೆ ಕೊಂಚ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಗುವ ನಿರೀಕ್ಷೆ ಅಭಿಮಾನಿಗಳದ್ದು.

‘ಶುಗರ್ ಫ್ಯಾಕ್ಟರಿ’ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಉಳಿದ ಭಾಗದ ಶೂಟಿಂಗ್​ ನಡೆಸುವ ಆಲೋಚನೆ ಚಿತ್ರತಂಡದ್ದು. ಡಾರ್ಲಿಂಗ್​ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಲ್​ ಮೊಂತೆರೋ, ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

ಡಾರ್ಲಿಂಗ್​ ಕೃಷ್ಣ ನಿರ್ದೇಶನ ಮಾಡಿ, ನಟಿಸಿದ್ದ ಲವ್​ ಮಾಕ್ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. 2020ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾ ನಂತರದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ.

ಇದನ್ನೂ ಓದಿ: Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!