AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ. ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ […]

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್
ದರ್ಶನ್
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 10, 2021 | 2:43 PM

Share

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ.

ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಸಿನಿಮಾ ಸ್ವಾಗತಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಂಬಾನೇ ಬೇಸರ ಮೂಡಿಸಿತ್ತು. ಈಗ ಚಿತ್ರ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಇಂದು ಮುಂಜಾನೆ 11 ಗಂಟೆಗೆ ದರ್ಶನ್​ ಫೇಸ್​ಬುಕ್​ ಲೈವ್ ಬಂದಿದ್ದರು. ಈ ವೇಳೆ ದರ್ಶನ್​ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್​ 11ರಂದು ನಾವು ಚಿತ್ರಮಂದಿರಕ್ಕೆ ಬರುತ್ತೇವೆ ಎಂದು ದರ್ಶನ್​ ಹೇಳಿದ್ದಾರೆ.

ಸಿನಿಮಾ ತೆರೆಗೆ ಬರೋಕೆ ಇನ್ನೂ ಎರಡು ತಿಂಗಳು ಬಾಕಿ ಇದೆ. ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಮಾರ್ಚ್​ ವೇಳೆಗೆ ಚಿತ್ರಮಂದಿರದಲ್ಲಿ ಪೂರ್ತಿಯಾಗಿ ಪ್ರೇಕ್ಷಕರನ್ನು ಕೂರಿಸಲು ಅವಕಾಶ ನೀಡಿದರೂ ಆಶ್ಚರ್ಯವಿಲ್ಲ. ಹಾಗಾದಲ್ಲಿ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ