AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ. ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ […]

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 2:43 PM

Share

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ.

ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಸಿನಿಮಾ ಸ್ವಾಗತಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಂಬಾನೇ ಬೇಸರ ಮೂಡಿಸಿತ್ತು. ಈಗ ಚಿತ್ರ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಇಂದು ಮುಂಜಾನೆ 11 ಗಂಟೆಗೆ ದರ್ಶನ್​ ಫೇಸ್​ಬುಕ್​ ಲೈವ್ ಬಂದಿದ್ದರು. ಈ ವೇಳೆ ದರ್ಶನ್​ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್​ 11ರಂದು ನಾವು ಚಿತ್ರಮಂದಿರಕ್ಕೆ ಬರುತ್ತೇವೆ ಎಂದು ದರ್ಶನ್​ ಹೇಳಿದ್ದಾರೆ.

ಸಿನಿಮಾ ತೆರೆಗೆ ಬರೋಕೆ ಇನ್ನೂ ಎರಡು ತಿಂಗಳು ಬಾಕಿ ಇದೆ. ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಮಾರ್ಚ್​ ವೇಳೆಗೆ ಚಿತ್ರಮಂದಿರದಲ್ಲಿ ಪೂರ್ತಿಯಾಗಿ ಪ್ರೇಕ್ಷಕರನ್ನು ಕೂರಿಸಲು ಅವಕಾಶ ನೀಡಿದರೂ ಆಶ್ಚರ್ಯವಿಲ್ಲ. ಹಾಗಾದಲ್ಲಿ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?