AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ದಾಖಲು; ಚಿಕಿತ್ಸೆ ಆರಂಭ

ನಟ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಇದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ಅವರು ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿದ್ದಾರೆ. ಈಗ ಅವರು ಬೆಂಗಳೂರಿನ ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದಿನಿಂದಲೇ (ನವೆಂಬರ್​ 1) ಅವರಿಗೆ ಚಿಕಿತ್ಸೆ ಆರಂಭಿಸಲಾಗುತ್ತಿದೆ. ಶೀಘ್ರವೇ ಅವರು ವರದಿ ಸಲ್ಲಿಸಬೇಕಿದೆ.

ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ದಾಖಲು; ಚಿಕಿತ್ಸೆ ಆರಂಭ
ಆಸ್ಪತ್ರೆಗೆ ದಾಖಲಾದ ದರ್ಶನ್
ಮದನ್​ ಕುಮಾರ್​
|

Updated on: Nov 01, 2024 | 4:15 PM

Share

ಬೆನ್ನು ನೋವಿನಿಂದ ನಟ ದರ್ಶನ್​ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಒಂದು ವಾರದ ಒಳಗೆ ಅವರು ಚಿಕಿತ್ಸೆಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಬೇಕಿದೆ. ಈಗಾಗಲೇ ಜಾಮೀನು ಪಡೆದು 2 ದಿನ ಕಳೆದಿದೆ. ಆದ್ದರಿಂದ ಸಮಯ ವ್ಯರ್ಥ ಮಾಡದೇ ಇಂದು (ನವೆಂಬರ್​ 1) ಅವರು ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಆಗಮಿಸಿರುವ ಕಾರಣದಿಂದ ಆಸ್ಪತ್ರೆಗೆ ಹೊರಗೆ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ನಾಲ್ಕು ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿರುವ ದರ್ಶನ್​ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿರುವುದರಿಂದ ಬಿಜಿಎಸ್ ಆಸ್ಪತ್ರೆಯ ಬಳಿ ಕೆಂಗೇರಿ ಠಾಣೆ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ. ಒಂದು ಕೆಎಸ್ಆರ್​ಪಿ ತುಕಡಿ ಜೊತೆ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

2013ರಲ್ಲೂ ಬೆನ್ನುನೋವಿನ ಚಿಕಿತ್ಸೆಗೆ ದರ್ಶನ್​ ಅವರು ಬಿಜಿಎಸ್​ ಆಸ್ಪತ್ರೆಗೆ ದಾಖಲಾಗಿದ್ದರು. ‘ಬೃಂದಾವನ’ ಸಿನಿಮಾದ ಶೂಟಿಂಗ್​ ವೇಳೆ ಕುದುರೆ ಮೇಲಿಂದ ಬಿದ್ದಿದ್ದರಿಂದ ಅವರಿಗೆ ನೋವು ಕಾಣಿಸಿಕೊಂಡಿತ್ತು. ಆಗಲೂ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈಗ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತ ಧನ್ವೀರ್​ ಜೊತೆ ದರ್ಶನ್ ಅವರು ಆಸ್ಪತ್ರೆಗೆ ಬಂದಿದ್ದಾರೆ.

ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

ಮೊದಲು ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಿಸಿದ್ದಾಗ ಅರ್ಜಿ ವಜಾ ಆಗಿತ್ತು. ಆ ಬಳಿಕ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಯಿತು. ದರ್ಶನ್​ ನಡೆಯಲು ಕೂಡ ಕಷ್ಟಪಡುವಂತಹ ಪರಿಸ್ಥಿತಿ ಬಂತು. ಹಾಗಾಗಿ ಬಳ್ಳಾರಿಯಲ್ಲಿ ವೈದ್ಯರು ತಪಾಸಣೆ ನಡೆಸಿ, ಸರ್ಜರಿಯ ಅಗತ್ಯ ಇದೆ ಎಂದು ಹೇಳಿದ್ದರು. ಆ ವರದಿಯ ಆಧಾರದಲ್ಲಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ (ಅ.30) ಅವರಿಗೆ ಜಾಮೀನು ನೀಡಲಾಯಿತು. ಆರು ವಾರದ ಒಳಗೆ ಅವರು ಚಿಕಿತ್ಸೆ ಪಡೆಯಬೇಕಿದೆ. ಒಟ್ಟು 131 ದಿನಗಳ ಕಾಲ ಜೈಲಿನಲ್ಲಿ ಇದ್ದ ದರ್ಶನ್ ಈಗ ಹೊರಗೆ ಬಂದಿದ್ದಾರೆ. ಹಲವು ಷರತ್ತುಗಳ ಮೇಲೆ ಜಾಮೀನು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ