AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ. ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ […]

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ
KUSHAL V
| Edited By: |

Updated on:Jun 28, 2020 | 4:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ.

ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ ಉಳಿದಿತ್ತು. ಆದ್ರೆ ಚಿರು ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ಅವರ ವಾಯ್ಸ್​ ಡಬ್ಬಿಂಗ್​ ಭಾಗವು ಹಾಗೇ ಉಳಿದುಬಿಟ್ಟಿತ್ತು. ಹೀಗಾಗಿ ಚಿತ್ರದ ನಿರ್ಮಾಪಕರಿಗೆ ತುಸು ಚಿಂತೆ ಶುರುವಾಗಿತ್ತು.

ರಾಜ ಮಾರ್ತಾಂಡನಿಗೆ ವಾಯ್ಸ್​ ನೀಡಲಿದ್ದಾರೆ ದರ್ಶನ್​, ಧ್ರುವ ಆದರೆ, ಅಗಲಿದ ಅಣ್ಣನಿಗೆ ಬಲಗೈ ಭಂಟನಂತಿದ್ದ ತಮ್ಮ ಧ್ರುವ ಇದೀಗ ಸಿನಿಮಾದ ನಿರ್ಮಾಪಕರಿಗೆ ಅರ್ಧಕ್ಕೆ ನಿಂತ ಚಿತ್ರವನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಚಿರು ಪುಣ್ಯತಿಥಿ ನಡೆದ ದಿನದಂದು ಧ್ರುವ ನಿರ್ಮಾಪಕರಿಗೆ ಮಾತು ಕೊಟ್ಟಿದ್ದಾರೆ. ಇದರ ಜೊತೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ನೆರವಿನ ಹಸ್ತ ಚಾಚಿದ್ದು ಅಗತ್ಯ ಬಿದ್ದರೆ ಸ್ವತಃ ತಾವೇ ವಾಯ್ಸ್ ಡಬ್ ಮಾಡೋದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಚಿತ್ರದ ನಿರ್ಮಾಪಕರು ಹೇಳಿದ್ದಾರೆ. ಹೀಗಾಗಿ ನೋವಲ್ಲೂ ಸ್ಟಾರ್ ನಟರು ನೀಡಿರೋ ಮಾತಿಗೆ ಚಿತ್ರತಂಡ ಸಂತಸಗೊಂಡಿದೆ.

Published On - 4:52 pm, Sun, 28 June 20

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ