AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ. ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ […]

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ
KUSHAL V
| Edited By: |

Updated on:Jun 28, 2020 | 4:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ.

ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ ಉಳಿದಿತ್ತು. ಆದ್ರೆ ಚಿರು ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ಅವರ ವಾಯ್ಸ್​ ಡಬ್ಬಿಂಗ್​ ಭಾಗವು ಹಾಗೇ ಉಳಿದುಬಿಟ್ಟಿತ್ತು. ಹೀಗಾಗಿ ಚಿತ್ರದ ನಿರ್ಮಾಪಕರಿಗೆ ತುಸು ಚಿಂತೆ ಶುರುವಾಗಿತ್ತು.

ರಾಜ ಮಾರ್ತಾಂಡನಿಗೆ ವಾಯ್ಸ್​ ನೀಡಲಿದ್ದಾರೆ ದರ್ಶನ್​, ಧ್ರುವ ಆದರೆ, ಅಗಲಿದ ಅಣ್ಣನಿಗೆ ಬಲಗೈ ಭಂಟನಂತಿದ್ದ ತಮ್ಮ ಧ್ರುವ ಇದೀಗ ಸಿನಿಮಾದ ನಿರ್ಮಾಪಕರಿಗೆ ಅರ್ಧಕ್ಕೆ ನಿಂತ ಚಿತ್ರವನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಚಿರು ಪುಣ್ಯತಿಥಿ ನಡೆದ ದಿನದಂದು ಧ್ರುವ ನಿರ್ಮಾಪಕರಿಗೆ ಮಾತು ಕೊಟ್ಟಿದ್ದಾರೆ. ಇದರ ಜೊತೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ನೆರವಿನ ಹಸ್ತ ಚಾಚಿದ್ದು ಅಗತ್ಯ ಬಿದ್ದರೆ ಸ್ವತಃ ತಾವೇ ವಾಯ್ಸ್ ಡಬ್ ಮಾಡೋದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಚಿತ್ರದ ನಿರ್ಮಾಪಕರು ಹೇಳಿದ್ದಾರೆ. ಹೀಗಾಗಿ ನೋವಲ್ಲೂ ಸ್ಟಾರ್ ನಟರು ನೀಡಿರೋ ಮಾತಿಗೆ ಚಿತ್ರತಂಡ ಸಂತಸಗೊಂಡಿದೆ.

Published On - 4:52 pm, Sun, 28 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ