AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ. ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ […]

ಅಗಲಿದ ‘ರಾಜ ಮಾರ್ತಾಂಡ’ನಿಗೆ ದನಿಗೂಡಿಸಲಿದ್ದಾರೆ ದರ್ಶನ್, ಧ್ರುವ
KUSHAL V
| Edited By: |

Updated on:Jun 28, 2020 | 4:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಉತ್ತುಂಗಕ್ಕೆ ಏರುತ್ತಿದ್ದ ಯುವ ನಟ, ಅಗಾಧ ಪ್ರತಿಭೆ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರ ಹಠಾತ್​ ನಿಧನ ಎಲ್ಲರನ್ನೂ ದಂಗು ಬಡಿಸಿತ್ತು. ತನ್ನ ಸರಳ ಸ್ವಭಾವ ಹಾಗೂ ಸಹಜ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಚಿರು ಈಗ ಎಲ್ಲರನ್ನು ಬಿಟ್ಟು ಬಹುದೂರ ಹೋಗಿದ್ದಾರೆ.

ಈ ಮಧ್ಯೆ ತಾವು ನಟಿಸುತ್ತಿದ್ದ ಕೆಲವು ಸಿನಿಮಾಗಳು ಅಪೂರ್ಣವಾಗಿ ಉಳಿದಿವೆ. ಅವುಗಳಲ್ಲಿ ರಾಜ ಮಾರ್ತಾಂಡ ಸಿನಿಮಾ ಕೂಡಾ ಒಂದು. ಶೂಟಿಂಗ್​ ಭಾಗ ಮುಗಿದಿದ್ದ ಚಿತ್ರಕ್ಕೆ ಲಾಕ್​ಡೌನ್ ಎದುರಾಗಿ ಡಬ್ಬಿಂಗ್ ಮಾಡುವುದು ಮಾತ್ರ ಬ್ಯಾಲೆನ್ಸ್ ಉಳಿದಿತ್ತು. ಆದ್ರೆ ಚಿರು ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ಅವರ ವಾಯ್ಸ್​ ಡಬ್ಬಿಂಗ್​ ಭಾಗವು ಹಾಗೇ ಉಳಿದುಬಿಟ್ಟಿತ್ತು. ಹೀಗಾಗಿ ಚಿತ್ರದ ನಿರ್ಮಾಪಕರಿಗೆ ತುಸು ಚಿಂತೆ ಶುರುವಾಗಿತ್ತು.

ರಾಜ ಮಾರ್ತಾಂಡನಿಗೆ ವಾಯ್ಸ್​ ನೀಡಲಿದ್ದಾರೆ ದರ್ಶನ್​, ಧ್ರುವ ಆದರೆ, ಅಗಲಿದ ಅಣ್ಣನಿಗೆ ಬಲಗೈ ಭಂಟನಂತಿದ್ದ ತಮ್ಮ ಧ್ರುವ ಇದೀಗ ಸಿನಿಮಾದ ನಿರ್ಮಾಪಕರಿಗೆ ಅರ್ಧಕ್ಕೆ ನಿಂತ ಚಿತ್ರವನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಚಿರು ಪುಣ್ಯತಿಥಿ ನಡೆದ ದಿನದಂದು ಧ್ರುವ ನಿರ್ಮಾಪಕರಿಗೆ ಮಾತು ಕೊಟ್ಟಿದ್ದಾರೆ. ಇದರ ಜೊತೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ನೆರವಿನ ಹಸ್ತ ಚಾಚಿದ್ದು ಅಗತ್ಯ ಬಿದ್ದರೆ ಸ್ವತಃ ತಾವೇ ವಾಯ್ಸ್ ಡಬ್ ಮಾಡೋದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಚಿತ್ರದ ನಿರ್ಮಾಪಕರು ಹೇಳಿದ್ದಾರೆ. ಹೀಗಾಗಿ ನೋವಲ್ಲೂ ಸ್ಟಾರ್ ನಟರು ನೀಡಿರೋ ಮಾತಿಗೆ ಚಿತ್ರತಂಡ ಸಂತಸಗೊಂಡಿದೆ.

Published On - 4:52 pm, Sun, 28 June 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್