ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?

ಜೈಲು ಊಟ ಸೇವಿಸಿದ್ದರಿಂದ ದರ್ಶನ್​ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್​ಗೆ ಮನೆ ಊಟ ತರಿಸಲು ಕೋರ್ಟ್​ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.

ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?
ದರ್ಶನ್​
Follow us
|

Updated on: Jul 18, 2024 | 6:57 AM

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್​ನ ಅರೆಸ್ಟ್ ಮಾಡಲಾಗಿದೆ. ಸದ್ಯ ದರ್ಶನ್ ಹಾಗೂ ಆತನ ಸಹಚರರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂದು (ಜುಲೈ 18) ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ಅವರನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ಈ ವೇಳೆ ಅವರುಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ಜಡ್ಜ್​ ಮುಂದೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಪೊಲೀಸರ ವಾದ ಏನು?

ನಟ ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ಇದರ ಜೊತೆಗೆ ಅವರು ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಊಟಕ್ಕೆ ಬೇಡಿಕೆ

ಇದರ ನಡುವೆ ಮನೆ ಊಟ ಕಲ್ಪಿಸುವಂತೆ ಕೋರಿ ರಿಟ್ ಅರ್ಜಿಯೂ ಇಂದು ವಿಚಾರಣೆ ನಡೆಯಲಿದೆ. ನಟ ದರ್ಶನ್ ಅರ್ಜಿಗೆ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಿಂದಲೂ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಮಧ್ಯಾಹ್ನದ ಬಳಿಕ ನಟ ದರ್ಶನ್ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು