AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?

ಜೈಲು ಊಟ ಸೇವಿಸಿದ್ದರಿಂದ ದರ್ಶನ್​ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್​ಗೆ ಮನೆ ಊಟ ತರಿಸಲು ಕೋರ್ಟ್​ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.

ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Jul 18, 2024 | 6:57 AM

Share

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್​ನ ಅರೆಸ್ಟ್ ಮಾಡಲಾಗಿದೆ. ಸದ್ಯ ದರ್ಶನ್ ಹಾಗೂ ಆತನ ಸಹಚರರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂದು (ಜುಲೈ 18) ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ಅವರನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ಈ ವೇಳೆ ಅವರುಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ಜಡ್ಜ್​ ಮುಂದೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಪೊಲೀಸರ ವಾದ ಏನು?

ನಟ ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ಇದರ ಜೊತೆಗೆ ಅವರು ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಊಟಕ್ಕೆ ಬೇಡಿಕೆ

ಇದರ ನಡುವೆ ಮನೆ ಊಟ ಕಲ್ಪಿಸುವಂತೆ ಕೋರಿ ರಿಟ್ ಅರ್ಜಿಯೂ ಇಂದು ವಿಚಾರಣೆ ನಡೆಯಲಿದೆ. ನಟ ದರ್ಶನ್ ಅರ್ಜಿಗೆ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಿಂದಲೂ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಮಧ್ಯಾಹ್ನದ ಬಳಿಕ ನಟ ದರ್ಶನ್ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ