AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ

ಸುದ್ದಿಗೋಷ್ಠಿ ನಡೆಸುವಾಗ ಇಂದ್ರಜಿತ್​ ಹಾಗೂ ದರ್ಶನ್​ ಇಬ್ಬರೂ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದರು. ಇನ್ನು, ದರ್ಶನ್​ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್​ ಆಗಿತ್ತು. ಈ ಆಡಿಯೋದಲ್ಲಿ ಅತೀ ಕೆಟ್ಟ ಶಬ್ದಗಳಿಂದ ದರ್ಶನ್​ ಮಾಧ್ಯಮಗಳಿಗೆ ಬೈದಿದ್ದರು.

‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ
ಇಂದ್ರಜಿತ್​ ಲಂಕೇಶ್​-ದರ್ಶನ್​
TV9 Web
| Edited By: |

Updated on: Jul 20, 2021 | 3:17 PM

Share

ನಟ ದರ್ಶನ್​ ಹಾಗೂ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಡುವಿನ ಮಾತಿನ ಗುದ್ದಾಟ ಮುಂದುವರಿದಿದೆ. ಇಬ್ಬರೂ ಸುದ್ದಿಗೋಷ್ಠಿ ನಡೆಸಿ ಪರಸ್ಪರ ಕಿತ್ತಾಡುತ್ತಿದ್ದಾರೆ. ಈ ವೇಳೆ ಇಬ್ಬರೂ ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಹೀಗಾಗಿ ದರ್ಶನ್ ಮತ್ತು ಇಂದ್ರಜಿತ್‌ ಅವರನ್ನು 5 ವರ್ಷ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್‌ಗೆ ದೂರು ದಾಖಲು ಮಾಡಲಾಗಿದೆ.

ಸುದ್ದಿಗೋಷ್ಠಿ ನಡೆಸುವಾಗ ಇಂದ್ರಜಿತ್​ ಹಾಗೂ ದರ್ಶನ್​ ಇಬ್ಬರೂ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದರು. ಇನ್ನು, ದರ್ಶನ್​ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್​ ಆಗಿತ್ತು. ಈ ಆಡಿಯೋದಲ್ಲಿ ಅತೀ ಕೆಟ್ಟ ಶಬ್ದಗಳಿಂದ ದರ್ಶನ್​ ಮಾಧ್ಯಮಗಳಿಗೆ ಬೈದಿದ್ದರು. ಹೀಗಾಗಿ, ಮಾನವಹಕ್ಕು, ಭ್ರಷ್ಟಚಾರ ನಿಗ್ರಹದಳ ಸಂಸ್ಥೆ ಫಿಲ್ಮ್ ಚೇಂಬರ್‌ಗೆ ದೂರು ನೀಡಿದೆ.  ‘ನಟ ದರ್ಶನ್ ಮತ್ತು ಇಂದ್ರಜಿತ್‌ ಅವರನ್ನು 5 ವರ್ಷ ಬ್ಯಾನ್ ಮಾಡಬೇಕು. ದರ್ಶನ್ ಅವಾಚ್ಯ ಪದಗಳನ್ನು ಬಳಕೆ ಮಾಡಿದ್ದಾರೆ. ದರ್ಶನ್ ಮಾತಿಗೆ ಕಡಿವಾಣ ಹಾಕಬೇಕು’ ಎಂದು ದೂರಿನಲ್ಲಿ ಕೋರಲಾಗಿದೆ.

ಮೈಸೂರಿನ ದಿ ಪ್ರಿನ್ಸ್​ ಹೋಟೆಲ್​ ಸಿಬ್ಬಂದಿ ಗಂಗಾಧರ್​ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್​ ಆರೋಪಿಸಿದ್ದರು. ದರ್ಶನ್​ ವಿರುದ್ಧ ಮಾಡಿರುವ ಗಂಭೀರ ಆರೋಪದಿಂದ ಇಂದ್ರಜಿತ್​ ಬೆದರಿಕೆ ಎದುರಿಸುತ್ತಿದ್ದಾರೆ. ‘ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅದನ್ನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ದರ್ಶನ್​ ಪ್ರಚೋದನೆ ಮೂಲಕ ದರ್ಶನ್​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಮೂಲಕ, ವಾಟ್ಸ್​ ಆ್ಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  ಪ್ರತಿ 30 ಸೆಕೆಂಡ್​ಗೆ ಒಂದು ಕರೆ ಬರ್ತಿದೆ. ಅಶ್ಲೀಲ ಚಿತ್ರಗಳಲ್ಲದೆ, ಅಶ್ಲೀಲ ಮೆಸೇಜ್​ಕೂಡ ಬರ್ತಿದೆ. ಹೀಗಾಗಿ ಸೈಬರ್​ ಕ್ರೈಮ್​ಗೆ ದೂರು ನೀಡುತ್ತಿದ್ದೇನೆ. ಅವರಿಗೆ ಪಾಠ ಕಲಿಸುತ್ತೇನೆ’ ಎಂದು ಎಚ್ಚರಿಸಿದ್ದಾರೆ ಇಂದ್ರಜಿತ್​.

ಇದನ್ನೂ ಓದಿ: ದದರ್ಶನ್ ಹಲ್ಲೆ ಆರೋಪ ಪ್ರಕರಣ: ಪೊಲೀಸರಿಗೆ ಇನ್ನೂ ಸಿಗದ ಭದ್ರತಾ ಸಿಬ್ಬಂದಿ ಪ್ರಕಾಶ್

ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ: ದರ್ಶನ್ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕ್ತಿದಾರೆ, ಇವರಿಗೆ ಪಾಠ ಕಲಿಸುತ್ತೇನೆ; ಇಂದ್ರಜಿತ್ ಎಚ್ಚರಿಕೆ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!