AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ; ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್

ಜಾಮೀನು ಪಡೆಯಲು ದರ್ಶನ್​ ಮತ್ತು ಪವಿತ್ರಾ ಗೌಡ ಇನ್ನಷ್ಟ ದಿನ ಕಾಯುವುದು ಅನಿವಾರ್ಯ ಆಗಿದೆ. ಅವರಿಬ್ಬರ ಜಾಮೀನು ಅರ್ಜಿ ವಿಚಾರಣೆಯ ದಿನಾಂಕವನ್ನು ಮುಂದೂಡಲಾಗಿದೆ. ಸೆಪ್ಟೆಂಬರ್​ 27ಕ್ಕೆ ದರ್ಶನ್​ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಪವಿತ್ರಾ ಗೌಡ ಜಾಮೀನು ಜಾಮೀನು ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆಯಾಗಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ; ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್
ಪವಿತ್ರಾ ಗೌಡ, ದರ್ಶನ್​
ರಮೇಶ್​ ಎಮ್​.
| Edited By: |

Updated on: Sep 23, 2024 | 4:00 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್​ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಅಷ್ಟು ಸುಲಭಕ್ಕೆ ಜಾಮೀನು ಸಿಗುತ್ತಿಲ್ಲ. ಇತ್ತೀಚೆಗಷ್ಟೇ ದರ್ಶನ್​ ಅವರು ಬೇಲ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 27ಕ್ಕೆ ಮುಂದೂಡಲಾಗಿದೆ. ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್​ 25ಕ್ಕೆ ಮುಂದೂಡಿಕೆ ಆಗಿದೆ.

ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಯಾವಾಗ ಜಾಮೀನು ಸಿಗತ್ತೋ ಎಂಬ ಚಿಂತೆಯಲ್ಲೇ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನಿತರ ಆರೋಪಿಗಳು ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ಇತ್ತೀಚೆಗಷ್ಟೇ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ಅಂತ್ಯವಾಗಿದ್ದು, ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಶಾಕಿಂಗ್​ ಅಂಶಗಳು ಬಹಿರಂಗ ಆಗಿವೆ. ರೇಣುಕಾ ಸ್ವಾಮಿಯ ಕೊಲೆ ನಡೆದಿದ್ದು ಹೇಗೆ, ಯಾರೆಲ್ಲ ಭಾಗಿಯಾಗಿದ್ದರು ಎಂಬಿತ್ಯಾದಿ ವಿವರಗಳು ಚಾರ್ಜ್​ಶೀಟ್​ನಲ್ಲಿ ಇವೆ. ಚಾರ್ಜ್​ಶೀಟ್​ ಸಲ್ಲಿಕೆ ಬಳಿಕ ದರ್ಶನ್​ ಹಾಗೂ ಇತರ ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು.

ಇದನ್ನೂ ಓದಿ: ‘ದುರ್ವರ್ತನೆ ಬೇಡ’; ಜೈಲಲ್ಲಿರುವ ಆರೋಪಿ ದರ್ಶನ್​ಗೆ ಪತ್ರ ಬರೆದು ವಕೀಲರ ನೀತಿಪಾಠ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ದರ್ಶನ್​ ಅವರು ರಾಜಾತಿಥ್ಯ ಪಡೆದಿದ್ದರು. ಜೈಲಿನ ನಿಯಮಗಳನ್ನ ಉಲ್ಲಂಘನೆ ಮಾಡಿದ್ದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೋ ಮತ್ತು ವಿಡಿಯೋಗಳು ಬಹಿರಂಗ ಆಗಿದ್ದವು. ಅವರು ಪ್ರಭಾವಿ ವ್ಯಕ್ತಿ ಆಗಿದ್ದರಿಂದ ಜೈಲಿನೊಳಗೆ ಇದ್ದಾಗಲೇ ಈ ಅಕ್ರಮಗಳನ್ನು ಎಸಗಿದರು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಒಂದು ವೇಳೆ ಜಾಮೀನು ಸಿಕ್ಕರೆ ಅವರು ತಮ್ಮ ಪ್ರಭಾವ ಬಳಸಿ ಸಾಕ್ಷಿನಾಶಕ್ಕೆ ಪ್ರಯತ್ನಿಸಬಹುದು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ಅರ್ಜಿ ವಜಾಗೊಂಡರೂ ಅಚ್ಚರಿ ಇಲ್ಲ.

ಎ16 ಕೇಶವಮೂರ್ತಿಗೆ ಜಾಮೀನು:

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ16 ಆಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್​ನಿಂದ ಕೇಶವಮೂರ್ತಿಗೆ ಜಾಮೀನು ನೀಡಲಾಗಿದೆ. ತುಮಕೂರು ಜೈಲಿನಲ್ಲಿರುವ 16ನೇ ಆರೋಪಿ ಕೇಶವಮೂರ್ತಿಗೆ ಸದ್ಯಕ್ಕೆ ರಿಲೀಫ್​ ಸಿಕ್ಕಿದೆ. ಇನ್ನುಳಿದ ಆರೋಪಿಗಳು ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!