ತಿಂಗಳುಗಳ ಬಳಿಕ ದರ್ಶನ್, ಪವಿತ್ರಾ ಭೇಟಿ, ಕೋರ್ಟ್​ನಲ್ಲಿ ನಡೆದಿದ್ದೇನು?

Darshan Thoogudeepa-Pavithra Gowda: ನಟ ದರ್ಶನ್, ಪವಿತ್ರಾ ಗೌಡ ಹಾಗೂ ರೇಣುಕಾ ಸ್ವಾಮಿ ಪ್ರಕರಣದ ಇತರೆ ಎಲ್ಲ ಆರೋಪಿಗಳು ಇಂದು (ಜನವರಿ 10) ನ್ಯಾಯಾಲಯಕ್ಕೆ ಹಾಜರಾದರು. ಬಂಧನಕ್ಕೆ ಒಳಗಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಸಾರ್ವಜನಿಕವಾಗಿ ಮುಖಾ-ಮುಖಿ ಆದರು. ಈ ವೇಳೆ ಇಬ್ಬರ ನಡುವೆ ಮಾತುಕತೆ ನಡೆದಿದೆ.

ತಿಂಗಳುಗಳ ಬಳಿಕ ದರ್ಶನ್, ಪವಿತ್ರಾ ಭೇಟಿ, ಕೋರ್ಟ್​ನಲ್ಲಿ ನಡೆದಿದ್ದೇನು?
Darshan Thoogudeepa Movie
Follow us
ಮಂಜುನಾಥ ಸಿ.
|

Updated on: Jan 10, 2025 | 11:38 AM

ರೇಣುಕಾ ಸ್ವಾಮಿ ಕೊಲೆ ಆರೋಪಿಗಳಿಗೆಲ್ಲ ಜಾಮೀನು ದೊರೆತಿದೆ. ಜೈಲಿನಿಂದ ಬಿಡುಗಡೆ ಆದ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಸೇರಿದ್ದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ನಾಗರಾಜು ಸೇರಿದಂತೆ ಎಲ್ಲ ಆರೋಪಿಗಳು ಇಂದು (ಜನವರಿ 10) ಸಿಸಿಎಚ್ 57ರ ಕೋರ್ಟ್‌ನಲ್ಲಿ ಹಾಜರಾದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ದರ್ಶನ್ ಹಾಗೂ ಪವಿತ್ರಾ ಗೌಡ ಅವರುಗಳು ಪರಸ್ಪರ ಮುಖಾಮುಖಿ ಆದರು.

ಪವಿತ್ರಾ ಗೌಡ ಹಾಗೂ ಇನ್ನಿತರೆ ಆರೋಪಿಗಳು ತುಸು ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಬಂದಿದ್ದರು. ಪವಿತ್ರಾ ಗೌಡ ಅವರು ತಮ್ಮ ವಕೀಲರೊಂದಿಗೆ ಚರ್ಚೆ ಮಾಡುತ್ತಾ ನ್ಯಾಯಾಧೀಶರ ಆಗಮನಕ್ಕೆ ಕಾಯುತ್ತಾ ನಿಂತಿದ್ದರು. ದರ್ಶನ್ ತುಸು ತಡವಾಗಿ ನ್ಯಾಯಾಲಯಕ್ಕೆ ಬಂದರು. ಅವರನ್ನು ಅವರ ಗೆಳೆಯ ಧನ್ವೀರ್ ಗೌಡ ಕಾರಿನಲ್ಲಿ ಕರೆದುಕೊಂಡು ಬಂದರು. ನ್ಯಾಯಾಲಯಕ್ಕೆ ಬಂದ ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಮಾತನಾಡಿದರು.

ದರ್ಶನ್ ಅವರ ಆರೋಗ್ಯವನ್ನು ಪವಿತ್ರಾ ಗೌಡ ವಿಚಾರಿಸಿದರು. ಪವಿತ್ರಾರ ಪ್ರಶ್ನೆಗೆ ಉತ್ತರಿಸಿದ ದರ್ಶನ್, ಆ ಬಳಿಕ ಪವಿತ್ರಾರ ಆರೋಗ್ಯವನ್ನು ದರ್ಶನ್ ವಿಚಾರಿಸಿದ್ದಲ್ಲದೆ, ಅವರ ಬೆನ್ನು ಸವರಿ ಅವರನ್ನು ಸಂತೈಸಿದರು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ನ್ಯಾಯಾಧೀಶರು ಆಗಮಿಸಿ, ಎಲ್ಲರ ಹಾಜರಿ ಪಡೆದು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದರು. ಮತ್ತೆ ಮುಂದಿನ ತಿಂಗಳು 25ರಂದು ಎಲ್ಲ ಆರೋಪಿಗಳು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ಇದನ್ನೂ ಓದಿ:ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ, ವಿಚಾರಣೆ ಮುಂದೂಡಿಕೆ

ಈ ನಡುವೆ ಪವಿತ್ರಾ ಗೌಡ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ದೇವಾಲಯಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿದ್ದಾರೆ. ಪವಿತ್ರಾ ಗೌಡ ಹೊರ ರಾಜ್ಯದ ದೇವಾಲಯವೊಂದಕ್ಕೆ ತೆರಳಬೇಕಿದ್ದು, ಇದಕ್ಕಾಗಿ ನ್ಯಾಯಾಧೀಶರ ಬಳಿ ಅನುಮತಿ ಕೋರಿದ್ದಾರೆ. ಪವಿತ್ರಾ ಅವರಿಗೆ ಅನುಮತಿ ದೊರಕುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ