ವಕೀಲರಿಗೆ ದರ್ಶನ್​, ಪವಿತ್ರಾ ಗೌಡ ಕೋಟಿ ಕೋಟಿ ಕೊಡ್ತಾರಾ? ಲಾಯರ್​ ಹೇಳೋದು ಕೇಳಿ..

ದರ್ಶನ್​ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದ್ದು, ಬೇಗ ಜಾಮೀನು ಸಿಗಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಲಾಯರ್ ನಾರಾಯಣಸ್ವಾಮಿ ಅವರು ಪರಪ್ಪನ ಅಗ್ರಹಾರದಲ್ಲಿ ಇಂದು (ಜುಲೈ 10) ದರ್ಶನ್​ ಅವರನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಕೀಲರು ಕೆಲವು ಮುಖ್ಯ ವಿಚಾರಗಳನ್ನು ತಿಳಿಸಿದ್ದಾರೆ.

ವಕೀಲರಿಗೆ ದರ್ಶನ್​, ಪವಿತ್ರಾ ಗೌಡ ಕೋಟಿ ಕೋಟಿ ಕೊಡ್ತಾರಾ? ಲಾಯರ್​ ಹೇಳೋದು ಕೇಳಿ..
ಪವಿತ್ರಾ ಗೌಡ, ದರ್ಶನ್​, ವಕೀಲ ನಾರಾಯಣಸ್ವಾಮಿ
Follow us
| Updated By: ಮದನ್​ ಕುಮಾರ್​

Updated on: Jul 10, 2024 | 9:05 PM

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಹಾಗೂ ಇನ್ನುಳಿದ ಸಹಚರರಿಗೆ ಯಾವಾಗ ಜಾಮೀನು ಸಿಗುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಇದೆ. ವಕೀಲ ನಾರಾಯಣಸ್ವಾಮಿ ಅವರು ಇಂದು (ಜುಲೈ 10) ಪರಪ್ಪನ ಅಗ್ರಹಾರಕ್ಕೆ ತೆರಳಿ ದರ್ಶನ್​ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಇದು ಹೈಪ್ರೊಫೈಲ್​ ಕೇಸ್​ ಆದ್ದರಿಂದ ಎಲ್ಲರೂ ಇದರ ಮೇಲೆ ಕಣ್ಣಿಟ್ಟಿದ್ದಾರೆ. ಮುಂದೇನಾಗುತ್ತದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ. ದರ್ಶನ್​ ಜೊತೆ ಅರೆಸ್ಟ್ ಆಗಿರುವ ಇನ್ನುಳಿದವರ ಬಗ್ಗೆ ವಕೀಲ ನಾರಾಯಣಸ್ವಾಮಿ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮ ವೃತ್ತಿಯ ಬಗ್ಗೆ ಕೆಲವು ವಿಷಯ ಹಂಚಿಕೊಂಡಿದ್ದಾರೆ.

ದರ್ಶನ್​, ಪವಿತ್ರಾ ಗೌಡ ಜೊತೆ ಅರೆಸ್ಟ್​ ಆಗಿರುವವರಲ್ಲಿ ಅನೇಕರು ಬಡವರು ಇದ್ದಾರೆ. ಅವರಿಗೂ ನಾರಾಯಣಸ್ವಾಮಿ ಅವರಿಂದ ಕಾನೂನಿನ ನೆರವು ಸಿಗುತ್ತಾ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಈ ಬಗ್ಗೆ ವಕೀಲರು ಉತ್ತರಿಸಿದ್ದಾರೆ. ‘ಐದು ಜನರಿಗೆ ನಾವೇ ವಕಾಲತ್ತು ವಹಿಸಿದ್ದೇವೆ. ಅವರೆಲ್ಲ ಬಡವರು. ಇಲ್ಲಿ ಏನು ನಡೆಯುತ್ತಿದೆ ಎಂಬುದೇ ಅವರಿಗೆ ತಿಳಿದಿಲ್ಲ. ಕಾವೇರಿ ಗಲಾಟೆ ಆದಾಗ ಅನೇಕರ ಮೇಲೆ ಪೊಲೀಸರು ಸುಳ್ಳು ಕೇಸ್​ ಹಾಕಿದ್ದರು. 180 ಜನರನ್ನು ನಾವು ದುಡ್ಡು ತೆಗೆದುಕೊಳ್ಳದೇ ಉಚಿತವಾಗಿ ಬಿಡಿಸಿದ್ದೇವೆ’ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಜೈಲಿಂದಲೇ ಫ್ಯಾನ್ಸ್ ಬಗ್ಗೆ ವಿಚಾರಿಸಿದ ನಟ ದರ್ಶನ್​; ಎಲ್ಲರಿಗೂ ಒಂದು ಮನವಿ

‘ಜೈಲಿನಲ್ಲಿ ಬಹಳ ಜನ ನಿರಪರಾಧಿಗಳು ಇದ್ದಾರೆ. ನಮ್ಮಂತವರ ಸೇವೆ ಅವರಿಗೆ ಅಗತ್ಯ ಇದ್ದರೆ ಖಂಡಿತಾ ಮಾಡುತ್ತೇವೆ. ದರ್ಶನ್​ ಕೇಸ್​ ಮಾತ್ರವಲ್ಲ. ಬೇರೆ ಯಾವುದೇ ಪ್ರಕರಣದಲ್ಲಿ ನಿರಪರಾಧಿಗಳು ಇದ್ದು, ಅವರಿಗೆ ಆರ್ಥಿಕ ಸಂಕಷ್ಟ ಇದೆ ಎಂದರೆ ನನ್ನಂತಹ ಲಾಯರ್​ಗಳು ಸಹಾಯ ಮಾಡುತ್ತಾರೆ. ನಮ್ಮದು ಸೇವೆಯ ವೃತ್ತಿ. ದರ್ಶನ್​ ಅವರು ಕೋಟಿಗಟ್ಟಲೆ ಹಣ ಕೊಟ್ಟರು, ಪವಿತ್ರಾ ಗೌಡ ಕೋಟಿ ರೂಪಾಯಿ ಕೊಟ್ಟರು, ಬಡವರಿಗೆಲ್ಲ ಲಾಯರ್​ ಸಹಾಯ ಮಾಡಲ್ಲ ಅಂತ ಜನರು ಹೇಳುತ್ತಾರೆ. ಅದೆಲ್ಲವೂ ಸುಳ್ಳು’ ಎಂದಿದ್ದಾರೆ ನಾರಾಯಣಸ್ವಾಮಿ.

‘ನಮ್ಮ ಸೇವೆಯನ್ನು ಯಾರೇ ಬಯಸಿದರೂ ನಾವು ಸಹಾಯ ಮಾಡುತ್ತೇವೆ. ನಾಳೆ ದರ್ಶನ್​ ಮತ್ತು ಪವಿತ್ರಾ ಗೌಡ ಅವರು ಬೇರೆ ಲಾಯರ್​ನ ಇಡಬಹುದು. ಇನ್ನುಳಿದ ಹುಡುಗರಿಗೂ ಬೇರೆ ಲಾಯರ್​ ಬರುತ್ತಾರೆ ಎಂದೇನೂ ಇಲ್ಲ. ಆಗ ನಾವು ಮುಂದುವರಿಯಬಹುದು. ಏನು ಬೇಕಾದರೂ ಆಗಬಹುದು. ಇಂದು ನಾನು ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳನ್ನೂ ಭೇಟಿ ಮಾಡಿ ಬಂದಿದ್ದೇನೆ’ ಎಂದು ನಾರಾಯಣಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ