AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

‘ಚಾಲೆಂಜಿಂಗ್ ಸ್ಟಾರ್ ದಾಸ ದರ್ಶನ್ ಹಾಗೂ ವಿಜಯಲಕ್ಷ್ಮಿ ಅತ್ತಿಗೆ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ಯಾವಾಗ್ಲೂ ಹಿಂಗೆ ನಗ್ ನಗ್ತಾ ಜೊತೆಯಾಗಿ ಖುಷಿಯಾಗಿ ಇರಿ ಅಣ್ಣ ಮತ್ತು ಅತ್ತಿಗೆ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  
ದರ್ಶನ್​-ವಿಜಯಲಕ್ಷ್ಮಿ ಹಾಊ ವೆಡ್ಡಿಂಗ್​ ಕಾರ್ಡ್​
ರಾಜೇಶ್ ದುಗ್ಗುಮನೆ
|

Updated on:May 19, 2021 | 4:37 PM

Share

ನಟ ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನದಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಈ ವಿಶೇಷ ದಿನದಂದು ಅವರ ವಿವಾಹ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಒಂದು ವೈರಲ್​ ಆಗಿದೆ.  2003ರಲ್ಲಿ ವಿಜಯಲಕ್ಷ್ಮಿ ಅವರನ್ನು ದರ್ಶನ್​ 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆ ಆದರು. ವಿಜಯಲಕ್ಷ್ಮಿ ಕೆಮಿಕಲ್​ ಇಂಜಿನಿಯರ್ ಪದವೀಧರೆ​. ದರ್ಶನ್​-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್​. ದರ್ಶನ್​-ವಿಜಯಲಕ್ಷ್ಮಿ ಮದುವೆಗೆ ಇಂದು 18 ವರ್ಷ. ಈ ವಿಶೇಷ ದಿನದಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.

ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ಈಗ ವೈರಲ್​ ಆಗಿದೆ. 19-05-2003ನೇ ಸೋಮವಾರ ಬೆಳಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್​ ಮಹಲ್​ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ ಎಂದು ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.

‘ಚಾಲೆಂಜಿಂಗ್ ಸ್ಟಾರ್ ದಾಸ ದರ್ಶನ್ ಹಾಗೂ ವಿಜಯಲಕ್ಷ್ಮಿ ಅತ್ತಿಗೆ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ಯಾವಾಗ್ಲೂ ಹಿಂಗೆ ನಗ್ ನಗ್ತಾ ಜೊತೆಯಾಗಿ ಖುಷಿಯಾಗಿ ಇರಿ ಅಣ್ಣ ಮತ್ತು ಅತ್ತಿಗೆ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ರಾಬರ್ಟ್​ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈ ಸಿನಿಮಾ ನೋಡಿ ಅಭಿಮಾನಿಗಳು ಸಖತ್​​ ಖುಷಿ ಆಗಿದ್ದರು. ಈ ಸಿನಿಮಾ 100 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಚಿತ್ರ ತೆರೆಕಂಡ ನಂತರ ದರ್ಶನ್​ ಯಾವುದೇ ಹೊಸ ಚಿತ್ರವನ್ನು ಘೋಷಿಸಿಲ್ಲ.

ಇದನ್ನೂ ಓದಿ: Kotigobba 3: ದರ್ಶನ್​ಗೆ ಹೀರೋಯಿನ್​ ಆಗಿದ್ದ ನಟಿಗೆ ಈಗ ಸುದೀಪ್ ತಾಯಿ ಪಾತ್ರ?

ತೂಗುದೀಪ ಶ್ರೀನಿವಾಸ್​, ದರ್ಶನ್​, ದಿನಕರ್​ ಬಗ್ಗೆ ಮೀನಾ ತೂಗುದೀಪ ಅಪರೂಪದ ಮಾತುಗಳು

Published On - 4:16 pm, Wed, 19 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ