AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

Darshan Thoogudeepa: ನಟ ದರ್ಶನ್​, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಇದರ ನಡುವೆ ದರ್ಶನ್​ಗೆ ಹೊಸದೊಂದು ತಲೆ ನೋವು ಶುರುವಾಗಿದೆ. ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ನರಸೀಪುರ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ.

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ
Darshan Vijayalakshmi
ಮಂಜುನಾಥ ಸಿ.
|

Updated on: May 23, 2025 | 11:37 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್​ಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಜಾರಿ ಆಗಿದೆ. ದರ್ಶನ್ ಮಾತ್ರವೇ ಅಲ್ಲದೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಹ ಸಮನ್ಸ್ ಜಾರಿ ಆಗಿದೆ. ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದರು ಈ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಆಗಿದೆ.

‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆಯನ್ನು ನೀಡಿದ್ದರು ದರ್ಶನ್, ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ:ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ

ದರ್ಶನ್ ಫಾರಂ ಹೌಸ್​ನಲ್ಲಿ ಹಲವು ವಿಧದ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಪ್ರಾಣಿ ಪ್ರೇಮಿಯಾದ ದರ್ಶನ್ ಫಾರಂ ಹೌಸ್​​ನಲ್ಲಿ, ಹಸು, ಎತ್ತು, ಕುದುರೆ, ಗಿಳಿಗಳು, ಬಾತುಕೋಳಿ, ಕುರಿ, ಕೋಳಿ ಇನ್ನೂ ಕೆಲವಾರು ಪ್ರಾಣಿಗಳು ಇವೆ. ಈ ಹಿಂದೆ ಯೂಟ್ಯೂಬರ್ ಒಬ್ಬಾತ ದರ್ಶನ್ ಫಾರಂ ಹೌಸ್​​ನ ವಿಡಿಯೋ ಮಾಡಿದ್ದರು. ಆ ವಿಡಿಯೋ ಗಮನಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಫಾರಂ ಹೌಸ್​ ಮೇಲೆ ದಾಳಿ ಮಾಡಿ ನಿಯಮಬಾಹಿರವಾಗಿ ಇರಿಸಿಕೊಂಡಿದ್ದ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ