AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ

Challenging Star Darshan: ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ.

Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Jun 05, 2021 | 3:12 PM

Share

ನಟ ದರ್ಶನ್​ಗೆ ವನ್ಯಜೀವಿಗಳ ಮೇಲೆ ಅಪಾರ ಪ್ರೀತಿ ಇದೆ. ಮೈಸೂರು ಝೂನಲ್ಲಿ ಅವರು ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರೀತಿ ಮೆರೆದಿದ್ದಾರೆ. ಈಗ ದರ್ಶನ್​ ಜನರ ಬಳಿ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಝೂಗಳಲ್ಲಿನ ಪ್ರಾಣಿಗಳನ್ನ ದತ್ತು ಪಡೆಯುವಂತೆ ನಟ ದರ್ಶನ್ ಕೋರಿಕೊಂಡಿದ್ದಾರೆ.

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ 9 ಝೂಗಳಿವೆ. ಎಲ್ಲಾ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ನಿಮ್ಮ ಕೈಲಾದ ಪ್ರಾಣಿಗಳನ್ನ ದತ್ತು ಪಡೆಯಿರಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

ಈ ಬಗ್ಗೆ ವಿಶೇಷ ವಿಡಿಯೋ ಮಾಡಿರುವ ಡಿ ಬಾಸ್​​, ಕೊವಿಡ್​ನಿಂದ ಮಾನವರಿಗೆ ತೊಂದರೆ ಆಗಿದೆ. ಅದರ ಜತೆಗೆ ಪ್ರಾಣಿ ಸಂಕುಲಕ್ಕೂ ಸಮಸ್ಯೆ ಆಗಿದೆ. ನಮ್ಮ ರಾಜ್ಯದಲ್ಲಿ 9 ಝೂಗಳು ಇವೆ. ಹೀಗಾಗಿ, ಬೇರೆ ದೇಶದಿಂದ ಎಲ್ಲರೂ ಇಲ್ಲಿಗೆ ಬರ್ತಾರೆ. ಅವರು ನೀಡುವ ಟಿಕೆಟ್​ ಹಣದಿಂದ ಝೂ ನಿರ್ವಹಣೆ ಆಗುತ್ತಿತ್ತು. ಆದರೆ, ಈಗ ಈ ಪ್ರಕ್ರಿಯೆ ನಿಂತಿದೆ. ಹೀಗಾಗಿ, ಪ್ರಾಣಿಗಳ ನಿರ್ವಹಣೆ, ಅವರನ್ನು ನೋಡಿಕೊಳ್ಳೋರಿಗೆ ಸಂಬಳ ನೀಡೋದು ಕಷ್ಟವಾಗುತ್ತಿದೆ ಎಂದಿದ್ದಾರೆ​.

ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ, ಅದನ್ನು ನಿರ್ವಹಣೆ ಮಾಡಲು ಅವಕಾಶ ಇದೆ. ಲವ್​ಬರ್ಡ್​ಗೆ 1 ಸಾವಿರ, ಹುಲಿಗೆ 1 ಲಕ್ಷ, ಆನೆಗೆ 1.70 ಲಕ್ಷ ರೂಪಾಯಿ ನೀಡಿ ದತ್ತು ಪಡೆದರೆ ಒಂದು ವರ್ಷಗಳ ಕಾಲ ಅವುಗಳ ನಿರ್ವಹಣೆ ನಿಮ್ಮ ಹೆಸರಲ್ಲಾಗುತ್ತದೆ. ಝೂ ಆಫ್​​ ಕರ್ನಾಟಕ ಆ್ಯಪ್​ ಮೂಲಕ ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ ಎಂದು ತಿಳಿದುಕೊಳ್ಳಬಹುದು. ಹತ್ತಿರದ ಝೂಗೆ ಭೇಟಿ ನೀಡಿದರೂ ಇದನ್ನು ಮಾಡೋಕೆ ಸಾಧ್ಯ. ಇದೊಂದು ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸಿ ಎಂದು ದರ್ಶನ್​ ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

ಉಪೇಂದ್ರ, ಸುದೀಪ್​, ದರ್ಶನ್​ – ಟ್ವಿಟರ್​ನಲ್ಲಿ ಹೆಚ್ಚು ಫಾಲೋವರ್ಸ್​ ಹೊಂದಿರುವ ಸ್ಯಾಂಡಲ್​ವುಡ್ ಹೀರೋ ಯಾರು? ಇಲ್ಲಿದೆ ಮಾಹಿತಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ