AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ

Challenging Star Darshan: ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ.

Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Jun 05, 2021 | 3:12 PM

Share

ನಟ ದರ್ಶನ್​ಗೆ ವನ್ಯಜೀವಿಗಳ ಮೇಲೆ ಅಪಾರ ಪ್ರೀತಿ ಇದೆ. ಮೈಸೂರು ಝೂನಲ್ಲಿ ಅವರು ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರೀತಿ ಮೆರೆದಿದ್ದಾರೆ. ಈಗ ದರ್ಶನ್​ ಜನರ ಬಳಿ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಝೂಗಳಲ್ಲಿನ ಪ್ರಾಣಿಗಳನ್ನ ದತ್ತು ಪಡೆಯುವಂತೆ ನಟ ದರ್ಶನ್ ಕೋರಿಕೊಂಡಿದ್ದಾರೆ.

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ 9 ಝೂಗಳಿವೆ. ಎಲ್ಲಾ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ನಿಮ್ಮ ಕೈಲಾದ ಪ್ರಾಣಿಗಳನ್ನ ದತ್ತು ಪಡೆಯಿರಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

ಈ ಬಗ್ಗೆ ವಿಶೇಷ ವಿಡಿಯೋ ಮಾಡಿರುವ ಡಿ ಬಾಸ್​​, ಕೊವಿಡ್​ನಿಂದ ಮಾನವರಿಗೆ ತೊಂದರೆ ಆಗಿದೆ. ಅದರ ಜತೆಗೆ ಪ್ರಾಣಿ ಸಂಕುಲಕ್ಕೂ ಸಮಸ್ಯೆ ಆಗಿದೆ. ನಮ್ಮ ರಾಜ್ಯದಲ್ಲಿ 9 ಝೂಗಳು ಇವೆ. ಹೀಗಾಗಿ, ಬೇರೆ ದೇಶದಿಂದ ಎಲ್ಲರೂ ಇಲ್ಲಿಗೆ ಬರ್ತಾರೆ. ಅವರು ನೀಡುವ ಟಿಕೆಟ್​ ಹಣದಿಂದ ಝೂ ನಿರ್ವಹಣೆ ಆಗುತ್ತಿತ್ತು. ಆದರೆ, ಈಗ ಈ ಪ್ರಕ್ರಿಯೆ ನಿಂತಿದೆ. ಹೀಗಾಗಿ, ಪ್ರಾಣಿಗಳ ನಿರ್ವಹಣೆ, ಅವರನ್ನು ನೋಡಿಕೊಳ್ಳೋರಿಗೆ ಸಂಬಳ ನೀಡೋದು ಕಷ್ಟವಾಗುತ್ತಿದೆ ಎಂದಿದ್ದಾರೆ​.

ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ, ಅದನ್ನು ನಿರ್ವಹಣೆ ಮಾಡಲು ಅವಕಾಶ ಇದೆ. ಲವ್​ಬರ್ಡ್​ಗೆ 1 ಸಾವಿರ, ಹುಲಿಗೆ 1 ಲಕ್ಷ, ಆನೆಗೆ 1.70 ಲಕ್ಷ ರೂಪಾಯಿ ನೀಡಿ ದತ್ತು ಪಡೆದರೆ ಒಂದು ವರ್ಷಗಳ ಕಾಲ ಅವುಗಳ ನಿರ್ವಹಣೆ ನಿಮ್ಮ ಹೆಸರಲ್ಲಾಗುತ್ತದೆ. ಝೂ ಆಫ್​​ ಕರ್ನಾಟಕ ಆ್ಯಪ್​ ಮೂಲಕ ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ ಎಂದು ತಿಳಿದುಕೊಳ್ಳಬಹುದು. ಹತ್ತಿರದ ಝೂಗೆ ಭೇಟಿ ನೀಡಿದರೂ ಇದನ್ನು ಮಾಡೋಕೆ ಸಾಧ್ಯ. ಇದೊಂದು ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸಿ ಎಂದು ದರ್ಶನ್​ ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

ಉಪೇಂದ್ರ, ಸುದೀಪ್​, ದರ್ಶನ್​ – ಟ್ವಿಟರ್​ನಲ್ಲಿ ಹೆಚ್ಚು ಫಾಲೋವರ್ಸ್​ ಹೊಂದಿರುವ ಸ್ಯಾಂಡಲ್​ವುಡ್ ಹೀರೋ ಯಾರು? ಇಲ್ಲಿದೆ ಮಾಹಿತಿ

Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ