ಜೈಲಿನಿಂದ ಹಗಲು-ರಾತ್ರಿ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗೆ ಬೇಡಿಕೆ ಇಡುತ್ತಿರುವ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು ಬೇಲ್​ ಪಡೆಯಲು ಸಖತ್ ಪ್ರಯತ್ನ ಮಾಡುತ್ತಿದ್ದಾರೆ. ಜೈಲಿನಿಂದಲೇ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಫೋನ್​ ಕರೆ ಮಾಡಿ ಜಾಮೀನಿಗಾಗಿ ಒತ್ತಾಯಿಸುತ್ತಿದ್ದಾರೆ. ವಾರಕ್ಕೆ ಮೂರು ಬಾರಿ ಕರೆ ಮಾಡುವ ಅವಕಾಶ ಇದೆ. ಆ ಮೂರು ಬಾರಿಗೂ ದರ್ಶನ್​ ಅವರು ನಿರ್ಮಾಪಕರಿಗೆ ಕರೆ ಮಾಡಿದ್ದಾರೆ. ಅಕ್ಕ-ಪಕ್ಕದ ಖೈದಿಗಳ ಲಿಮಿಟ್​ ಕೂಡ ದರ್ಶನ್​ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.

ಜೈಲಿನಿಂದ ಹಗಲು-ರಾತ್ರಿ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗೆ ಬೇಡಿಕೆ ಇಡುತ್ತಿರುವ ದರ್ಶನ್
ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Jul 02, 2024 | 3:36 PM

ದೇಶಾದ್ಯಂತ ಸುದ್ದಿ ಆಗಿರುವ ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲುವಾಸ ಅನುಭವಿಸುತ್ತಿದ್ದಾರೆ. ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿ 11 ದಿನ ಆಗಿದೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್​ (Darshan) ಪ್ರಯತ್ನಿಸುತ್ತಿದ್ದಾರೆ. ಜೈಲಿನಲ್ಲಿ ದಿನ ಕಳೆಯುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಅದಕ್ಕಾಗಿ ಅವರು ಚಿತ್ರರಂಗದಲ್ಲಿ ತಮಗೆ ಆಪ್ತರಾಗಿರುವ ಕೆಲವು ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗಾಗಿ ಒತ್ತಾಯ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪರಪ್ಪನ ಅಗ್ರಹಾರ (Parappana Agrahara) ಜೈಲಿನಿಂದ ಹಗಲು-ರಾತ್ರಿ ಕರೆ ಮಾಡಿ ಜಾಮೀನಿಗೆ ವ್ಯವಸ್ಥೆ ಮಾಡುವಂತೆ ದರ್ಶನ್​ ಕೋರುತ್ತಿದ್ದಾರೆ.

ವಾರಕ್ಕೆ 3 ಬಾರಿ ಫೋನ್ ಕರೆ ಮಾಡಲು ಜೈಲಿನ ಸಿಬ್ಬಂದಿ ಅವಕಾಶ ಕೊಟ್ಟಿದ್ದಾರೆ. ಜೈಲಿನ ಫೋನ್ ಬೂತ್‌ನಿಂದ ದರ್ಶನ್ ಕರೆ ಮಾಡುತ್ತಿದ್ದಾರೆ. ಆದರೆ ಈವರೆಗೆ ಒಂದೇ ಒಂದು ಬಾರಿಯೂ ಅವರು ತಮ್ಮ ಕುಟುಂಬದವರಿಗೆ ಫೋನ್​ ಮಾಡಿಲ್ಲ. ಬದಲಿಗೆ, ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ಕರೆ ಮಾಡಿ ಜಾಮೀನಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರಾತ್ರಿಯಾದರೆ ಸಾಕು ದರ್ಶನ್​ ಕಡೆಯಿಂದ ನಿರ್ಮಾಪಕರಿಗೆ ಫೋನ್ ಕರೆಗಳು ಹೋಗಲು ಶುರುವಾಗುತ್ತವೆ.

ಹೇಗಾದರೂ ಮಾಡಿ ತಮ್ಮನ್ನು ಜೈಲಿನಿಂದ ಹೊರಗೆ ತರುವಂತೆ ದರ್ಶನ್​ ಒತ್ತಾಯ ಮಾಡುತ್ತಿದ್ದಾರೆ. ಅಕ್ಕ-ಪಕ್ಕದ ಖೈದಿಗಳಿಗೆ ಮೀಸಲಾಗಿದ್ದ ಫೋನ್​ ಕರೆಗಳನ್ನು ಕೂಡ ದರ್ಶನ್​ ಅವರೇ ಬಳಸಿಕೊಳ್ಳುತ್ತಿದ್ದಾರೆ. ಜಾಮೀನು ಪಡೆಯಬೇಕು ಎಂಬ ಹಂಬಲ ಅವರಲ್ಲಿ ಹೆಚ್ಚಾಗಿದೆ. ಸತತ 11 ದಿನಗಳಿಂದ ಜೈಲು ವಾಸದಲ್ಲಿ ಇರುವ ದರ್ಶನ್​ ಅವರನ್ನು ನೋಡಲು ಪರಪ್ಪನ ಅಗ್ರಹಾರದ ಬಳಿ ಅನೇಕರು ಬರುತ್ತಿದ್ದಾರೆ.

ಹೇಗಿದೆ ದರ್ಶನ್​ ಪರಿಸ್ಥಿತಿ?

ಪವಿತ್ರಾ ಗೌಡ ಜೊತೆ ದರ್ಶನ್​ ಜೈಲು ಸೇರಿದ ಕೂಡಲೇ ನಟನ ಕುಟುಂಬದವರು ಭೇಟಿಯಾಗಲು ಬಂದಿರಲಿಲ್ಲ. ನಂತರ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೀಡಿದರು. ಆ ಬಳಿಕ ಸಹೋದರ ದಿನಕರ್ ತೂಗುದೀಪ, ತಾಯಿ ಮೀನಾ ಕೂಡ ಪರಪ್ಪನ ಅಗ್ರಗಾರಕ್ಕೆ ಬಂದು ದರ್ಶನ್​ ಅವರನ್ನು ಮಾತನಾಡಿಸಿದರು. ಕುಟುಂಬದರ ಭೇಟಿಯ ಬಳಿಕ ದರ್ಶನ್​ ಅವರು ಸ್ವಲ್ಪ ರಿಲ್ಯಾಕ್ಸ್​ ಆಗಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ಜುಲೈ 1ರಂದು ತಾಯಿ, ತಮ್ಮ, ಪತ್ನಿ, ಅಕ್ಕ ಸೇರಿದಂತೆ ದರ್ಶನ್ ಕುಟುಂಬದ ಹಲವರು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದರು. ಇದರಿಂದ ದರ್ಶನ್​ಗೆ ಸ್ವಲ್ಪ ಸಮಾಧಾನ ಆಗಿದೆ. ಹಾಗಾಗಿ, ರಾತ್ರಿ ಬೇಗನೇ ನಿದ್ರೆಗೆ ಜಾರಿದ್ದ ಅವರು ಇಂದು (ಜುಲೈ 2) ಬೆಳಿಗ್ಗೆ ಬೇಗ ಎದ್ದು ಸೆಲ್​ನಲ್ಲೇ ಕೆಲವೊತ್ತು ವಾಕಿಂಗ್ ಮಾಡಿದ್ದಾರೆ. ಜೈಲ್ ಸಿಬ್ಬಂದಿ ಬಳಿ ಬಿಸಿನೀರು ಕೇಳಿ ಪಡೆದರು. ಜೈಲಿನ ಮೆನುವಿನಂತೆ ದರ್ಶನ್​ಗೆ ಅವಲಕ್ಕಿ, ಉಪ್ಪಿಟ್ಟು ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ