ಜುಲೈ 4ಕ್ಕೆ ದರ್ಶನ್, ಯುವ ಕೇಸ್ ವಿಚಾರಣೆ; ಏನಾಗಲಿದೆ ಈ ಹೀರೋಗಳ ಭವಿಷ್ಯ?

ಜಾಮೀನಿಗಾಗಿ ದರ್ಶನ್​ ಅವರು ಕಷ್ಟಪಡುತ್ತಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಜು.4ರಂದು ಮತ್ತೆ ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಅದೇ ರೀತಿ, ನಟ ಯುವ ರಾಜ್​ಕುಮಾರ್ ಅವರ ಡಿವೋರ್ಸ್​ ಕೇಸ್​ ವಿಚಾರಣೆ ಕೂಡ ಜುಲೈ 4ರಂದು ನಡೆಯಲಿದೆ. ಈ ಕಾರಣದಿಂದ ಈ ಇಬ್ಬರು ಹೀರೋಗಳಿಗೆ ಇದು ಮಹತ್ವದ ದಿನ ಆಗಲಿದೆ.

ಜುಲೈ 4ಕ್ಕೆ ದರ್ಶನ್, ಯುವ ಕೇಸ್ ವಿಚಾರಣೆ; ಏನಾಗಲಿದೆ ಈ ಹೀರೋಗಳ ಭವಿಷ್ಯ?
ಯುವ ರಾಜ್​ಕುಮಾರ್​, ದರ್ಶನ್​
Follow us
|

Updated on: Jul 03, 2024 | 10:03 PM

ಕನ್ನಡ ಚಿತ್ರರಂಗ ಈಗ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಒಂದೆಡೆ ನಟ ದರ್ಶನ್​ (Darshan) ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಇನ್ನೊಂದೆಡೆ ಯುವ ರಾಜ್​ಕುಮಾರ್​ (Yuva Rajkumar) ಅವರು ಫ್ಯಾಮಿಲಿ ಕಿರಿಕ್​ನಿಂದ ಸುದ್ದಿ ಆಗಿದ್ದಾರೆ. ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ಯುವ ರಾಜ್​ಕುಮಾರ್​ ವಿಚ್ಛೇದನ (Divorce) ಬಯಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಜುಲೈ 4ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಬರಲಿದ್ದಾರೆ. ಅದೇ ರೀತಿ ದರ್ಶನ್​ ಅವರ ನ್ಯಾಯಾಂಗ ಬಂಧನ ಮುಕ್ತಾಯ ಆಗುತ್ತಿದ್ದು, ಅವರನ್ನು ಕೂಡ ಜು.4ರಂದು ಜಡ್ಜ್​ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜೂನ್​ 22ರಿಂದ ದರ್ಶನ್​ ಅವರ ಜೈಲು ವಾಸ ಆರಂಭ ಆಗಿತ್ತು. ಜುಲೈ 4ಕ್ಕೆ ನ್ಯಾಯಾಂಗ ಬಂಧನ ಅಂತ್ಯವಾಗುವ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್​ ಮುಂದೆ ಹಾಜರುಪಡಿಸಬಹುದು. ಇದು ಗಂಭೀರ ಪ್ರಕರಣ ಆಗಿರುವುದರಿಂದ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮುಂದುವರಿಸುವ ನಿರೀಕ್ಷೆ ಇದೆ.

ದರ್ಶನ್​ ಅವರು ಪ್ರಭಾವಿ ವ್ಯಕ್ತಿ. ಅವರು ಗಂಭೀರ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕೇಸ್​ಗೆ ಕುರಿತಂತೆ ಬೆಂಗಳೂರು ಪೊಲೀಸರು ಅನೇಕ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಹಂತದಲ್ಲಿ ಆರೋಪಿಗಳಿಂದ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆಯಬಹುದು. ಅಲ್ಲದೇ, ಕೊಲೆ ನಡೆದ ರೀತಿ ಬಹಳ ಹೀನಾಯವಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಈ ಎಲ್ಲ ಕಾರಣಗಳಿಂದ ದರ್ಶನ್​ಗೆ ಜಾಮೀನು ಸಿಗುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ನನ್ನದೂ ತಪ್ಪಿದೆ, ಯುವ ಮಾತು ಕೇಳಿ ಹಾಗೆ ಮಾಡಿದೆ: ಸಪ್ತಮಿ ಗೌಡ ಆಡಿಯೋ ವೈರಲ್

ಇನ್ನು, ಯುವ ರಾಜ್​ಕುಮಾರ್​ ಅವರ ಕುಟುಂಬದ ವಿಚಾರ ಬೀದಿಗೆ ಬಂದಿದೆ. ಪತ್ನಿ ಶ್ರೀದೇವಿ ಭೈರಪ್ಪ ಮೇಲೆ ಯುವ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ. ಯುವ ಕಳಿಸಿದ ಲೀಗಲ್​ ನೋಟಿಸ್​ಗೆ ಪ್ರತಿಕ್ರಿಯೆ ನೀಡಿರುವ ಶ್ರೀದೇವಿ ಅವರು ಕೆಲವು ಶಾಕಿಂಗ್​ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ನಟಿ ಸಪ್ತಮಿ ಗೌಡ ಜೊತೆ ಯುವ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣದಿಂದಲೇ ಯುವ-ಶ್ರೀದೇವಿ ಸಂಸಾರದಲ್ಲಿ ಮನಸ್ತಾಪ ಉಂಟಾಗಿದೆ. ಈ ದಂಪತಿಯ ವಿಚ್ಛೇದನದ ವಿಚಾರಣೆ ಕೂಡ ಜುಲೈ 4ರಂದು ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು