ಕನ್ನಡ ಚಿತ್ರರಂಗ ಈಗ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಒಂದೆಡೆ ನಟ ದರ್ಶನ್ (Darshan) ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಇನ್ನೊಂದೆಡೆ ಯುವ ರಾಜ್ಕುಮಾರ್ (Yuva Rajkumar) ಅವರು ಫ್ಯಾಮಿಲಿ ಕಿರಿಕ್ನಿಂದ ಸುದ್ದಿ ಆಗಿದ್ದಾರೆ. ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ಯುವ ರಾಜ್ಕುಮಾರ್ ವಿಚ್ಛೇದನ (Divorce) ಬಯಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಜುಲೈ 4ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಬರಲಿದ್ದಾರೆ. ಅದೇ ರೀತಿ ದರ್ಶನ್ ಅವರ ನ್ಯಾಯಾಂಗ ಬಂಧನ ಮುಕ್ತಾಯ ಆಗುತ್ತಿದ್ದು, ಅವರನ್ನು ಕೂಡ ಜು.4ರಂದು ಜಡ್ಜ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆಗಿರುವ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜೂನ್ 22ರಿಂದ ದರ್ಶನ್ ಅವರ ಜೈಲು ವಾಸ ಆರಂಭ ಆಗಿತ್ತು. ಜುಲೈ 4ಕ್ಕೆ ನ್ಯಾಯಾಂಗ ಬಂಧನ ಅಂತ್ಯವಾಗುವ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಬಹುದು. ಇದು ಗಂಭೀರ ಪ್ರಕರಣ ಆಗಿರುವುದರಿಂದ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮುಂದುವರಿಸುವ ನಿರೀಕ್ಷೆ ಇದೆ.
ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರು ಗಂಭೀರ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕೇಸ್ಗೆ ಕುರಿತಂತೆ ಬೆಂಗಳೂರು ಪೊಲೀಸರು ಅನೇಕ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಹಂತದಲ್ಲಿ ಆರೋಪಿಗಳಿಂದ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆಯಬಹುದು. ಅಲ್ಲದೇ, ಕೊಲೆ ನಡೆದ ರೀತಿ ಬಹಳ ಹೀನಾಯವಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಈ ಎಲ್ಲ ಕಾರಣಗಳಿಂದ ದರ್ಶನ್ಗೆ ಜಾಮೀನು ಸಿಗುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.
ಇದನ್ನೂ ಓದಿ: ನನ್ನದೂ ತಪ್ಪಿದೆ, ಯುವ ಮಾತು ಕೇಳಿ ಹಾಗೆ ಮಾಡಿದೆ: ಸಪ್ತಮಿ ಗೌಡ ಆಡಿಯೋ ವೈರಲ್
ಇನ್ನು, ಯುವ ರಾಜ್ಕುಮಾರ್ ಅವರ ಕುಟುಂಬದ ವಿಚಾರ ಬೀದಿಗೆ ಬಂದಿದೆ. ಪತ್ನಿ ಶ್ರೀದೇವಿ ಭೈರಪ್ಪ ಮೇಲೆ ಯುವ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ. ಯುವ ಕಳಿಸಿದ ಲೀಗಲ್ ನೋಟಿಸ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀದೇವಿ ಅವರು ಕೆಲವು ಶಾಕಿಂಗ್ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ನಟಿ ಸಪ್ತಮಿ ಗೌಡ ಜೊತೆ ಯುವ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣದಿಂದಲೇ ಯುವ-ಶ್ರೀದೇವಿ ಸಂಸಾರದಲ್ಲಿ ಮನಸ್ತಾಪ ಉಂಟಾಗಿದೆ. ಈ ದಂಪತಿಯ ವಿಚ್ಛೇದನದ ವಿಚಾರಣೆ ಕೂಡ ಜುಲೈ 4ರಂದು ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.