AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪ್ರಕರಣ: ರೇಣುಕಾ ಸ್ವಾಮಿ ಶವ ಸಾಗಿಸಿದ್ದ ಕಾರು ವಶ, ಯಾರ ಹೆಸರಲ್ಲಿದೆ ಕಾರು?

ರೇಣುಕಾ ಸ್ವಾಮಿಯ ಶವ ಸಾಗಿಸಲು ಬಳಸಲಾಗಿದೆ ಎನ್ನಲಾಗುತ್ತಿರುವ ಸ್ಕಾರ್ಪಿಯೋ ಕಾರು ಸೇರಿದಂತೆ ದರ್ಶನ್ ಬಳಸುತ್ತಿದ್ದ ಜೀಪ್ ರ್ವಾಂಗ್ಲರ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರುಗಳಿಂದ ಕೆಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ದರ್ಶನ್ ಪ್ರಕರಣ: ರೇಣುಕಾ ಸ್ವಾಮಿ ಶವ ಸಾಗಿಸಿದ್ದ ಕಾರು ವಶ, ಯಾರ ಹೆಸರಲ್ಲಿದೆ ಕಾರು?
ಮಂಜುನಾಥ ಸಿ.
|

Updated on: Jun 12, 2024 | 11:42 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಕುರಿತಾಗಿ ಹಲವು ಅಂಶಗಳು ಒಂದೊಂದಾಗಿ ಹೊರಬೀಳುತ್ತಿವೆ. ಇದೀಗ ಅಪರಾಧಕ್ಕೆ ಬಳಕೆಯಾಗಿದೆ ಎನ್ನಲಾಗುತ್ತಿರುವ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಹಾಗೂ ಜೀಪ್ ರ್ವಾಂಗ್ಲರ್ ಕಾರು, ರೇಣುಕಾ ಸ್ವಾಮಿಯನ್ನು ಕೂಡಿ ಹಾಕಿದ್ದ ರಾಜರಾಜೇಶ್ವರಿ ನಗರದ ಶೆಡ್​ಗೆ ಹೋಗುತ್ತಿರುವುದು ಬಹಿರಂಗವಾಗಿದೆ ಇದೀಗ ಪೊಲೀಸರು ಈ ಎರಡೂ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಕೆಲವು ವಸ್ತುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಾಹನಗಳಿಂದ ಒಂದು ತುಂಬಿದ ಮದ್ಯದ ಬಾಟಲಿ ಹಾಗೂ ಮಹಿಳೆಯರು ಬಳಸುವ ವ್ಯಾನಿಟಿ ಬ್ಯಾಗ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ವ್ಯಾನಿಟಿ ಬ್ಯಾಗು ಪವಿತ್ರಾ ಗೌಡ ಅವರಿಗ್ಗೆ ಸೇರಿದ್ದು ಎನ್ನಲಾಗುತ್ತಿದೆ. ಜೀಪ್ ಕಾರು ದರ್ಶನ್ ಆಪ್ತ ವಿನಯ್ ಹೆಸರಿನಲ್ಲಿ ನೊಂದಾವಣಿ ಆಗಿದೆ, ಬೆಂಗಳೂರಿನಲ್ಲಿ ಓಡಾಡಲು ದರ್ಶನ್ ಇದೇ ಕಾರನ್ನು ಹೆಚ್ಚಾಗಿ ಬಳಸುತ್ತಿದ್ದರು. ಕೊಲೆಯಾದ ರಾತ್ರಿ ಇದೇ ಕಾರಿನಲ್ಲಿ ರಾಜರಾಜೇಶ್ವರಿ ನಗರದ ಶೆಡ್​ಗೆ ಆಗಮಿಸಿದ್ದರು ಎನ್ನಲಾಗುತ್ತಿದೆ. ಈ ಕಾರಿನಿಂದ ಒಂದು ಮದ್ಯದ ಬಾಟಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕೊಲೆ ಆರೋಪದಲ್ಲಿ ದರ್ಶನ್​ಗೆ ಜೈಲು, ನಿರ್ಮಾಪಕರು ಆತಂಕದಲ್ಲಿ

ಇನ್ನು ಸ್ಕಾರ್ಪಿಯೋ ಕಾರು ದರ್ಶನ್​ರ ಮತ್ತೊಬ್ಬ ಆಪ್ತ ಪ್ರದೋಶ್ ಹೆಸರಿನಲ್ಲಿ ನೊಂದಾವಣಿ ಆಗಿದೆ. ಈ ಕಾರು ಸೆಕೆಂಡ್ಸ್ ಆಗಿದ್ದು, ಮೊದಲ ಮಾಲೀಕನಿಂದ ಪ್ರದೋಶ್ ಖರೀದಿಸಿದ್ದಾರೆ ಎನ್ನುತ್ತಿವೆ ಆರ್​ಟಿಓ ದಾಖಲೆಗಳು. ಮೂಲಗಳ ಪ್ರಕಾರ ಇದೇ ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳು ರೇಣುಕಾ ಸ್ವಾಮಿಯ ಶವವನ್ನು ಕೊಂಡೊಯ್ದು ಸುಮನಹಳ್ಳಿ ಮೋರಿಗೆ ಎಸದಿದ್ದರು ಎನ್ನಲಾಗುತ್ತಿದೆ. ಸ್ಕಾರ್ಪಿಯೋ ಕಾರಿನಿಂದ ವ್ಯಾನಿಟಿ ಬ್ಯಾಗ್ ವಶಪಡಿಸಿಕೊಳ್ಳಲಾಗಿದೆ. ಜೀಪ್ ಹಾಗೂ ಸ್ಪಾರ್ಪಿಯೋದ ಮಾಲೀಕರಾದ ವಿನಯ್ ಹಾಗೂ ಪ್ರದೋಶ್ ಇಬ್ಬರೂ ಸಹ ಈಗ ಪೊಲೀಸರ ವಶದಲ್ಲಿಯೇ ಇದ್ದಾರೆ.

ಎರಡೂ ಕಾರುಗಳು ಸದ್ಯ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿ ಬಳಿ ಇವೆ. ಬೆರಳಚ್ಚು ತಜ್ಞರು ಕಾರಿನಲ್ಲಿ ಬೆರಳಚ್ಚುಗಳ ಪ್ರತಿಯನ್ನು ತೆಗೆದುಕೊಳ್ಳಲಿದ್ದಾರೆ. ಶವವನ್ನು ಸಹ ಸಾಗಾಟ ಮಾಡಿರುವ ಕಾರಣ ಇನ್ನೂ ಕೆಲವು ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಲಿದ್ದಾರೆ.

ರೇಣುಕಾ ಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು 17 ಮಂದಿಯನ್ನು ಬಂಧಿಸಿದ್ದಾರೆ. ಅವರ ಮೊಬೈಲ್​ಗಳನ್ನು ಈಗಾಗಲೇ ವಶಕ್ಕೆ ಪಡೆದಿದ್ದು ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದರ ನಡುವೆ ಕಾರುಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಇನ್ನು ವಿನಯ್​ಗೆ ಸೇರಿದ ಸ್ಟೋನಿ ಬ್ರೂಕ್ಸ್ ಹೋಟೆಲ್​ನಲ್ಲಿಯೂ ಸಹ ಪೊಲೀಸರು ತನಿಖೆ ನಡೆಸಿ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!