AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್; ನಾಲ್ವರ ಜೊತೆ ಹರಟೆ

ಪರಪ್ಪನ ಅಗ್ರಹಾರದ ಸ್ಪೆಷಲ್ ಬ್ಯಾರಕ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ. ಆದರೆ ಅವರು ಬ್ಯಾರಕ್​ನಿಂದ ಹೊರಗೆ ಕುಳಿತು, ಸಹಚರರ ಜೊತೆ ಕಾಫಿ ಕುಡಿದು, ಸಿಗರೇಟ್ ಸೇದುತ್ತಿರುವ ಫೋಟೋ ಲಭ್ಯವಾಗಿದೆ. ಇದರಿಂದ ಈ ಪ್ರಕರಣದ ತನಿಖೆ ಬಗ್ಗೆ ಸಾಕಷ್ಟು ಅನುಮಾನ ಮೂಡುವಂತಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ಕೊನೇ ಹಂತಕ್ಕೆ ಬಂದಿದೆ.

ಜೈಲಿನಲ್ಲಿ ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್; ನಾಲ್ವರ ಜೊತೆ ಹರಟೆ
ದರ್ಶನ್ ವೈರಲ್ ಫೋಟೋ
Kiran HV
| Edited By: |

Updated on:Aug 25, 2024 | 3:51 PM

Share

ಕೊಲೆ ಆರೋಪದಲ್ಲಿ ನಟ ದರ್ಶನ್​ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ದರ್ಶನ್​ ಅವರ ಒಂದು ಫೋಟೋ ವೈರಲ್​ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್​ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ. ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್​ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್​ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ.

ದರ್ಶನ್​ ಅವರು ಸ್ಪೆಷಲ್​ ಬ್ಯಾರಕ್​ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್​ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್​ ಕೂಡ ಇದೆ. ಈ ಫೋಟೋ ವೈರಲ್​ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.

ಇದನ್ನೂ ಓದಿ: ದರ್ಶನ್​ ಕೇಸ್​ನಲ್ಲಿ ನಟ ಚಿಕ್ಕಣ್ಣಗೆ ಮತ್ತೆ ಬರಲಿದೆ ಪೊಲೀಸರ ನೋಟೀಸ್​?

ಇದು ಹೈ ಪ್ರೊಫೈಲ್​ ಕೇಸ್​ ಆದ ಕಾರಣ ಎಲ್ಲರ ಗಮನ ಇದರ ಮೇಲಿದೆ. ತನಿಖೆಯ ಪ್ರತಿ ಹಂತವೂ ಕೂಡ ಸುದ್ದಿ ಆಗುತ್ತಿದೆ. ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಈಗಾಗಲೇ ಅನೇಕ ಬಗೆಯ ಸಾಕ್ಷಿಗಳು ಸಿಕ್ಕಿವೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈ ಹಂತದಲ್ಲಿ ದರ್ಶನ್​ ಅವರ ವೈರಲ್​ ಫೋಟೋ ಹರಿದಾಡಿದೆ.

ಜೈಲಿನಲ್ಲಿ ದರ್ಶನ್​ ತಲೆ ಬೋಳಿಸಿಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಫೋಟೋ ನೋಡಿದ ಬಳಿಕ ಅದು ಖಚಿತವಾಗಿದೆ. ಅವರ ವಿಗ್​ ಕೂಡ ತೆಗೆಸಲಾಗಿದೆ. ಈಗಾಗಲೇ ಅನೇಕರು ಜೈಲಿಗೆ ಭೇಟಿ ನೀಡಿ ದರ್ಶನ್​ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೇಳಿಕೆ ನೀಡಿದ ಬಳಿಕ ನಟ ಚಿಕ್ಕಣ್ಣ ಕೂಡ ಜೈಲಿಗೆ ತೆರಳಿ ದರ್ಶನ್​ ಅವರನ್ನು ಮಾತನಾಡಿಸಿದ್ದರು. ಹಾಗಾಗಿ ಅವರಿಗೆ ಪೊಲೀಸರು ಮತ್ತೆ ನೋಟೀಸ್​ ನೀಡುವ ಸಾಧ್ಯತೆ ಇದೆ. ಕೇಸ್​ ತನಿಖೆ ಆರಂಭ ಆದಾಗ ದರ್ಶನ್​ ಅವರು ಎ2 ಆಗಿದ್ದರು. ಆದರೆ ಚಾರ್ಚ್​ಶೀಟ್​ ಸಲ್ಲಿಸುವ ಹಂತದಲ್ಲಿ ಅವರನ್ನು ಎ1 ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:43 pm, Sun, 25 August 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್