AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​ ಚೇಂಬರ್​ನಲ್ಲಿಂದು ಮಹತ್ವದ ಸಭೆ; ನಿರ್ಧಾರವಾಗಲಿದೆ ದರ್ಶನ್ ಸಿನಿ ಭವಿಷ್ಯ

ಇಂದು ಸಂಜೆ ನಾಲ್ಕು ಗಂಟೆಗೆ ಕಾರ್ಯಕಾರಿ ಸಮತಿ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ದರ್ಶನ್ ವಿಚಾರ ಪ್ರಮುಖವಾಗಿ ಚರ್ಚೆ ಆಗಲಿದೆ. ಈ ಸಭೆಯಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನುವ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕರ್ ಮಾತನಾಡಿದ್ದಾರೆ.

ಫಿಲ್ಮ್​ ಚೇಂಬರ್​ನಲ್ಲಿಂದು ಮಹತ್ವದ ಸಭೆ; ನಿರ್ಧಾರವಾಗಲಿದೆ ದರ್ಶನ್ ಸಿನಿ ಭವಿಷ್ಯ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 13, 2024 | 2:05 PM

Share

ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾ ಸ್ವಾಮಿಯನ್ನು ಇವರು ಹತ್ಯೆ ಮಾಡಿದ ಆರೋಪ ಹೊತ್ತಿದ್ದಾರೆ. ಈ ಪ್ರಕರಣದಿಂದ ದರ್ಶನ್ ಅವರನ್ನು ಸಿನಿಮಾ ರಂಗದಿಂದ ಬ್ಯಾನ್ ಮಾಡಬೇಕು ಎನ್ನುವ ಮಾತುಗಳು ಜೋರಾಗಿವೆ. ಈ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ಕರೆದಿದೆ. ಈ ವೇಳೆ ದರ್ಶನ್ ಭವಿಷ್ಯ ನಿರ್ಧಾರ ಆಗೋ ಸಾಧ್ಯತೆ ಇದೆ.

ಇಂದು (ಜೂನ್ 13) ಸಂಜೆ ನಾಲ್ಕು ಗಂಟೆಗೆ ಕಾರ್ಯಕಾರಿ ಸಮತಿ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ದರ್ಶನ್ ವಿಚಾರ ಪ್ರಮುಖವಾಗಿ ಚರ್ಚೆ ಆಗಲಿದೆ. ಈ ಸಭೆಯಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನುವ ಚರ್ಚೆ ಶುರುವಾಗಿದೆ.

ಈ ಬಗ್ಗೆ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕರ್ ಮಾತನಾಡಿದ್ದಾರೆ. ‘ಆ ಸಭೆಯಲ್ಲಿ ಎನು ನಿರ್ಧಾರವಾಗುತ್ತೋ ಅದಕ್ಕೆ ನಾವೆಲ್ಲ ಬದ್ಧರಾಗಿರ್ತಿವಿ. ಎಲ್ಲರೂ ಒಂದು ನಿರ್ಧಾರಕ್ಕೆ ಬರುತ್ತಾರೆ. ಕೇಸ್ ಕಾನೂನಿನ ಅಂಗಳದಲ್ಲಿ ಇರುವುದರಿಂದ ನಾವು ಮಧ್ಯೆ ಹೋಗೋಕೆ ಆಗಲ್ಲ. ಬ್ಯಾನ್ ಮಾಡೋದು ಕಷ್ಟ, ಚಿತ್ರರಂಗ ಅವರಿಗೆ ಅಸಹಕಾರ ವ್ಯಕ್ತಪಡಿಸಬಹುದು ಅಷ್ಟೇ. ಬ್ಯಾನ್ ಅನ್ನೋ ಪದ ಪ್ರಜಾಪ್ರಭುತ್ವದಲ್ಲಿ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ಸ್​ ಆರಾಧನ ಸಂಸ್ಕೃತಿಯನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ

‘ಮುಂಚೇ ಕೆಲವರನ್ನು ಬ್ಯಾನ್ ಮಾಡಿ ಆ ಬಳಿಕ ಹಿಂದೆ ತೆಗೆದುಕೊಂಡಿದ್ದೇವೆ. ಈ ಬಗ್ಗೆ ನ್ಯಾಯಲಯ ಕ್ರಮ ತೆಗೆದುಕೊಳ್ಳುತ್ತದೆ. ಅಸಹಾಕಾರ ತೋರುವುದರಿಂದ ಅವರ ಸಿನಿಮಾಗಳನ್ನು ಯಾರೂ ನಿರ್ದೆಶನ ಮಾಡಲ್ಲ, ಯಾರು ನಿರ್ಮಾಣ ಮಾಡಲ್ಲ. ಕಾರ್ಮಿಕ ವರ್ಗ ಸಾಥ್ ಕೊಡುವುದಿಲ್ಲ’ ಎಂದು ಉಮೇಶ್ ಬಣಕರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:40 pm, Thu, 13 June 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ