AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಡಿಐಜಿ ಪತ್ರ

ರೇಣುಕಾಸ್ವಾಮಿ ಕೊಲೆ ಕೇಸ್​ನ ಪ್ರಮುಖ ಆರೋಪಿ ದರ್ಶನ್​ ಬಳ್ಳಾರಿ ಜೈಲಿಗೆ ಸ್ಟೈಲಿಶ್​ ಲುಕ್​ನಲ್ಲಿ ಎಂಟ್ರಿ ನೀಡಿದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ನಟನಿಗೆ ಕೂಲಿಂಗ್​ ಕ್ಲಾಸ್​ ಧರಿಸಲು ಅನುಮತಿ ನೀಡಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿ ಪತ್ರ ಬರೆದಿದ್ದಾರೆ. ಬಳ್ಳಾರಿ ಜೈಲಿಗೆ ದರ್ಶನ್ ಬಂದ ಬಳಿಕ ಇನ್ನುಳಿದ ಖೈದಿಗಳಿಗೂ ಸಂಕಷ್ಟ ಶುರುವಾಗಿದೆ.

ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಡಿಐಜಿ ಪತ್ರ
ದರ್ಶನ್​
Sahadev Mane
| Edited By: |

Updated on: Aug 29, 2024 | 3:36 PM

Share

ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ವಿಶೇಷ ಸವಲತ್ತುಗಳನ್ನು ಪಡೆದ ಬಳಿಕ ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿಯೂ ಒಂದು ಎಡವಟ್ಟು ಆಗಿದೆ. ದರ್ಶನ್​ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿದ್ದಾರೆ. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಅದರ ಪರಿಣಾಮವಾಗಿ, ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ ಟಿ.ಪಿ. ಶೇಷ ಅವರು ಪತ್ರ ಬರೆದಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್​ ಸ್ಥಳಾಂತರದ ಇಂಚಿಂಚೂ ಪ್ರಕ್ರಿಯೆನ್ನು ಜನರು ಗಮನಿಸುತ್ತಿದ್ದಾರೆ. ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್​ ಅವರು ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್​​ ಲುಕ್​ನಲ್ಲಿ ಕಾಣಿಸಿಕೊಂಡರು. ಅವರಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಏಕೆ ಅನುಮತಿ ನೀಡಲಾಯಿತು ಎಂಬ ಪ್ರಶ್ನೆ ಉದ್ಭವ ಆಗಿದೆ.

ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು. ಆದರೆ ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ. ಶಿಸ್ತು ಕ್ರಮ ಜರುಗಿಸಲು ಮಾನ್ಯ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

ದರ್ಶನ್​ ಜತೆ ಕೈಕುಲುಕಲು ನಿರಾಕರಿಸಿದ ಪೊಲೀಸ್:

ಬಳ್ಳಾರಿ ಜೈಲ್​ ಒಳಗೆ ಹೋಗುವಾಗ ಪೊಲೀಸ್ ಅಧಿಕಾರಿಗಳಿಗೆ ಹಸ್ತಲಾಘವ ಮಾಡಲು ದರ್ಶನ್ ಮುಂದಾದರು. ಬೆಂಗಳೂರು ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬಂದಿದ್ದ ಎಸಿಪಿಗೆ ಶೇಕ್​ ಹ್ಯಾಂಡ್​ ನೀಡಲು ದರ್ಶನ್​ ಪ್ರಯತ್ನಿಸಿದರು. ಆದರೆ ದರ್ಶನ್​ ಜೊತೆ ಕೈ ಕುಲುಕಲು ಪೊಲೀಸ್ ಅಧಿಕಾರಿ ನಿರಾಕರಿಸಿದರು.

ಇದನ್ನೂ ಓದಿ: Darshan Thoogudeepa: ಬಳ್ಳಾರಿ ಜೈಲು ಸೇರಿದ ದರ್ಶನ್​ಗೆ ಹೊಸ ಕೈದಿ ಸಂಖ್ಯೆ

ಬೇರೆ ಖೈದಿಗಳಿಗೆ ಸಂಕಷ್ಟ:

ದರ್ಶನ ಆಗಮನದಿಂದ ಬಳ್ಳಾರಿ ಜೈಲಿನಲ್ಲಿರುವ ಉಳಿದ ಕೈದಿಗಳಿಗೆ ಸಂಕಷ್ಟ ಹೆಚ್ಚಾಗಿದೆ. ಜೈಲಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಕ್ಕೆ ಸಿಬ್ಬಂದಿ ಮುಂದಾಗಿದ್ದಾರೆ. ಖೈದಿಗಳಿಗೆ ಊಟ ಕೊಡಲು ಕುಟುಂಬದವರಿಗೆ ಜೈಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ಮೊದಲು ಊಟ ಕೊಡಲು ಅವಕಾಶ ನೀಡುತ್ತಿದ್ದ ಬಳ್ಳಾರಿ ಜೈಲು ಸಿಬ್ಬಂದಿ ಈಗ ಖೈದಿಗಳಿಗಾಗಿ ಊಟ ತಂದಿದ್ದ ಹಲವರನ್ನು ವಾಪಸ್ ಕಳಿಸಿದ್ದಾರೆ. ದರ್ಶನ್‌ಗಾಗಿ ತಿರುಪತಿ ಪ್ರಸಾದ ತಂದಿದ್ದ ಅಭಿಮಾನಿಯನ್ನೂ ವಾಪಸ್​ ಕಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ