AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಡಿಐಜಿ ಪತ್ರ

ರೇಣುಕಾಸ್ವಾಮಿ ಕೊಲೆ ಕೇಸ್​ನ ಪ್ರಮುಖ ಆರೋಪಿ ದರ್ಶನ್​ ಬಳ್ಳಾರಿ ಜೈಲಿಗೆ ಸ್ಟೈಲಿಶ್​ ಲುಕ್​ನಲ್ಲಿ ಎಂಟ್ರಿ ನೀಡಿದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ನಟನಿಗೆ ಕೂಲಿಂಗ್​ ಕ್ಲಾಸ್​ ಧರಿಸಲು ಅನುಮತಿ ನೀಡಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿ ಪತ್ರ ಬರೆದಿದ್ದಾರೆ. ಬಳ್ಳಾರಿ ಜೈಲಿಗೆ ದರ್ಶನ್ ಬಂದ ಬಳಿಕ ಇನ್ನುಳಿದ ಖೈದಿಗಳಿಗೂ ಸಂಕಷ್ಟ ಶುರುವಾಗಿದೆ.

ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಡಿಐಜಿ ಪತ್ರ
ದರ್ಶನ್​
Sahadev Mane
| Updated By: ಮದನ್​ ಕುಮಾರ್​|

Updated on: Aug 29, 2024 | 3:36 PM

Share

ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ವಿಶೇಷ ಸವಲತ್ತುಗಳನ್ನು ಪಡೆದ ಬಳಿಕ ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿಯೂ ಒಂದು ಎಡವಟ್ಟು ಆಗಿದೆ. ದರ್ಶನ್​ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿದ್ದಾರೆ. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಅದರ ಪರಿಣಾಮವಾಗಿ, ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ ಟಿ.ಪಿ. ಶೇಷ ಅವರು ಪತ್ರ ಬರೆದಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್​ ಸ್ಥಳಾಂತರದ ಇಂಚಿಂಚೂ ಪ್ರಕ್ರಿಯೆನ್ನು ಜನರು ಗಮನಿಸುತ್ತಿದ್ದಾರೆ. ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್​ ಅವರು ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್​​ ಲುಕ್​ನಲ್ಲಿ ಕಾಣಿಸಿಕೊಂಡರು. ಅವರಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಏಕೆ ಅನುಮತಿ ನೀಡಲಾಯಿತು ಎಂಬ ಪ್ರಶ್ನೆ ಉದ್ಭವ ಆಗಿದೆ.

ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು. ಆದರೆ ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ. ಶಿಸ್ತು ಕ್ರಮ ಜರುಗಿಸಲು ಮಾನ್ಯ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

ದರ್ಶನ್​ ಜತೆ ಕೈಕುಲುಕಲು ನಿರಾಕರಿಸಿದ ಪೊಲೀಸ್:

ಬಳ್ಳಾರಿ ಜೈಲ್​ ಒಳಗೆ ಹೋಗುವಾಗ ಪೊಲೀಸ್ ಅಧಿಕಾರಿಗಳಿಗೆ ಹಸ್ತಲಾಘವ ಮಾಡಲು ದರ್ಶನ್ ಮುಂದಾದರು. ಬೆಂಗಳೂರು ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬಂದಿದ್ದ ಎಸಿಪಿಗೆ ಶೇಕ್​ ಹ್ಯಾಂಡ್​ ನೀಡಲು ದರ್ಶನ್​ ಪ್ರಯತ್ನಿಸಿದರು. ಆದರೆ ದರ್ಶನ್​ ಜೊತೆ ಕೈ ಕುಲುಕಲು ಪೊಲೀಸ್ ಅಧಿಕಾರಿ ನಿರಾಕರಿಸಿದರು.

ಇದನ್ನೂ ಓದಿ: Darshan Thoogudeepa: ಬಳ್ಳಾರಿ ಜೈಲು ಸೇರಿದ ದರ್ಶನ್​ಗೆ ಹೊಸ ಕೈದಿ ಸಂಖ್ಯೆ

ಬೇರೆ ಖೈದಿಗಳಿಗೆ ಸಂಕಷ್ಟ:

ದರ್ಶನ ಆಗಮನದಿಂದ ಬಳ್ಳಾರಿ ಜೈಲಿನಲ್ಲಿರುವ ಉಳಿದ ಕೈದಿಗಳಿಗೆ ಸಂಕಷ್ಟ ಹೆಚ್ಚಾಗಿದೆ. ಜೈಲಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಕ್ಕೆ ಸಿಬ್ಬಂದಿ ಮುಂದಾಗಿದ್ದಾರೆ. ಖೈದಿಗಳಿಗೆ ಊಟ ಕೊಡಲು ಕುಟುಂಬದವರಿಗೆ ಜೈಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ಮೊದಲು ಊಟ ಕೊಡಲು ಅವಕಾಶ ನೀಡುತ್ತಿದ್ದ ಬಳ್ಳಾರಿ ಜೈಲು ಸಿಬ್ಬಂದಿ ಈಗ ಖೈದಿಗಳಿಗಾಗಿ ಊಟ ತಂದಿದ್ದ ಹಲವರನ್ನು ವಾಪಸ್ ಕಳಿಸಿದ್ದಾರೆ. ದರ್ಶನ್‌ಗಾಗಿ ತಿರುಪತಿ ಪ್ರಸಾದ ತಂದಿದ್ದ ಅಭಿಮಾನಿಯನ್ನೂ ವಾಪಸ್​ ಕಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ