AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಟೋಬರ್​ ನಂತರವೇ ದರ್ಶನ್​ಗೆ ಏಳ್ಗೆ, ಅಲ್ಲಿಯವರೆಗೆ ಜೈಲೇ ಗತಿ’; ವಿದ್ಯಾ ಶಂಕರಾನಂದ ಸರಸ್ವತಿ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್​ ಆಗಿದ್ದು, ಅವರ ವೃತ್ತಿ ಬದುಕಿಗೆ ಕಪ್ಪು ಚುಕ್ಕಿ ಆಗಿದೆ. ದರ್ಶನ್ ಅವರ ಜನ್ಮದಿನ, ರಾಶಿ-ನಕ್ಷತ್ರ ಉಲ್ಲೇಖಿಸಿ ಮುಂದೇನಾಗಬಹುದು ಎಂಬುದನ್ನು ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ವಿವರಿಸಿದ್ದಾರೆ. ಅಕ್ಟೋಬರ್​ವರೆಗೆ ಅವರಿಗೆ ಜಾಮೀನು ಸಿಗಲ್ಲ ಎಂದಿದ್ದಾರೆ.

‘ಅಕ್ಟೋಬರ್​ ನಂತರವೇ ದರ್ಶನ್​ಗೆ ಏಳ್ಗೆ, ಅಲ್ಲಿಯವರೆಗೆ ಜೈಲೇ ಗತಿ’; ವಿದ್ಯಾ ಶಂಕರಾನಂದ ಸರಸ್ವತಿ
‘ಅಕ್ಟೋಬರ್​ ನಂತರವೇ ದರ್ಶನ್​ಗೆ ಏಳ್ಗೆ, ಅಲ್ಲಿಯವರೆಗೆ ಜೈಲೇ ಗತಿ’; ವಿದ್ಯಾ ಶಂಕರಾನಂದ ಸರಸ್ವತಿ
ರಾಜೇಶ್ ದುಗ್ಗುಮನೆ
|

Updated on: Jul 06, 2024 | 7:33 AM

Share

ನಟ ದರ್ಶನ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್​ ಆಗಿದ್ದು, ಅವರ ವೃತ್ತಿ ಬದುಕಿಗೆ ಕಪ್ಪು ಚುಕ್ಕಿ ಆಗಿದೆ. ಅವರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಒಬ್ಬರು ಒಂದೊಂದು ರೀತಿಯ ಅಭಿಪ್ರಾಯ ತಿಳಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅತಿಥಿಯಾಗಿ ಬಂದು ಖ್ಯಾತಿ ಪಡೆದಿರೋ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಅವರು ದರ್ಶನ್ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

‘14-15 ವರ್ಷಗಳಲ್ಲಿ ಅವರು ಒಂದಲ್ಲಾ ಒಂದು ವಿವಾದ ಮಾಡಿಕೊಳ್ಳುತ್ತಿದ್ದಾರೆ. ಕೋಪ ಅನ್ನೋದು ಆಯುಧವೂ ಹೌದು, ದೌರ್ಬಲ್ಯವೂ ಹೌದು. ಆತುರಗಾರನಿಗೆ ಬುದ್ಧಿಮಟ್ಟ. ದರ್ಶನ್ ಅವರು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಯಾರ ತಪ್ಪು ಯಾರು ಸರಿ ಎಂಬುದನ್ನು ನಾವು ಹೇಳಬಾರದು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುತ್ತದೆ’ ಎಂದಿದ್ದಾರೆ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ.

ದರ್ಶನ್ ಅವರ ಜನ್ಮದಿನ, ರಾಶಿ-ನಕ್ಷತ್ರ ಉಲ್ಲೇಖಿಸಿ ಮುಂದೇನಾಗಬಹುದು ಎಂಬುದನ್ನು ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ವಿವರಿಸಿದ್ದಾರೆ. ‘2011ರಿಂದ ಗುರುದಶ ಶುರುವಾಗಿದೆ. ಅವರು ಆಗ ದೊಡ್ಡ ಅಪವಾದ ಅನುಭವಿಸಿದ್ದರು. ಹಲವು ದಿನ ಜೈಲಿನಲ್ಲಿದ್ದರು. ಹೊರಗೆ ಇರೋ ದರ್ಶನ್​ಗೂ ಆಂತರ್ಯದಲ್ಲಿರೋ ದರ್ಶನ್​ಗೂ ಸಾಕಷ್ಟು ವ್ಯತ್ಯಾಸ ಇದೆ. ಗುರುದಶ ಶುರುವಾದಾಗಿನಿಂದ ಅವರು ಮೇಲೆ ಹೋಗೋದು ಪಾತಾಳಕ್ಕೆ ಬೀಳೋದು ಆಗುತ್ತಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್ ಚಿತ್ರರಂಗದ ಆಸ್ತಿ ಮತ್ತು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಬಹಳ ದೊಡ್ಡದು: ಹಂಸಲೇಖ

‘2013ರ ನಂತರ ಬಿಡುಗಡೆ ಆದ ಯಾವ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ. 2023 ನವೆಂಬರ್​ನಿಂದ 2024ರ ಅಕ್ಟೋಬರ್​ವರೆಗೆ ಕುಜ ಭುಕ್ತಿ ಇದೆ. ಕುಜ ತುಂಬಾ ಕೋಪದವನು. ಕಾರಾಗೃಹ ವಾಸವನ್ನು ಕೊಡ್ತಾನೆ. ಅಲ್ಲಿಯೇ ಕೇತು ಬೇರೆ ಇದ್ದಾನೆ. ಹೀಗಾಗಿ ಅಪನಿಂದನೆ ಆಗುತ್ತದೆ. ತುಂಬಾನೇ ಜಾಗೃತಿಯಿಂದ ಇರಬೇಕಿತ್ತು. ದರ್ಶನ್ ಅರೆಸ್ಟ್ ಆದ ದಿನ ನೋಡೋದಾದರೆ ಮಂಗಳವಾರ ಅವರು ಅರೆಸ್ಟ್ ಆಗಿದ್ದಾರೆ. ಹುಟ್ಟಿದಾಗಲೂ, ಅರೆಸ್ಟ್ ಆದಾಗಲೂ ಗುರು ಇದ್ದಾನೆ. 2024ರ ಅಕ್ಟೋಬರ್​ವರೆಗೂ ಅವರಿಗೆ ಕಠಿಣ ಇದೆ. ಅಕ್ಟೋಬರ್ ನಂತರ ಅವರು ಜೀವನ ಬದಲಾಗುತ್ತದೆ. ದರ್ಶನ್​​ಗೆ ಅಕ್ಟೋಬರ್​ 28ವರೆಗೂ ಜಾಮೀನು ಅಸಾಧ್ಯ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ