AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಗೆ ಟಿವಿ ಏನೋ ಬಂತು, ಈಗ ಮತ್ತೊಂದು ಬೇಡಿಕೆ ಇಟ್ಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಲ್ಲಿ ದಿನ ದೂಡುತ್ತಿದ್ದು, ಇದೀಗ ಜೈಲು ಅಧಿಕಾರಿಗಳ ಬಳಿ ಹೊಸ ಬೇಡಿಕೆಯೊಂದನ್ನು ದರ್ಶನ್ ಇಟ್ಟಿದ್ದಾರೆ. ಇಷ್ಟು ದಿನ ಟಿವಿಗಾಗಿ ಒತ್ತಾಯಿಸಿದ್ದ ದರ್ಶನ್​ಗೆ ಟಿವಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಜೈಲಿಗೆ ಟಿವಿ ಏನೋ ಬಂತು, ಈಗ ಮತ್ತೊಂದು ಬೇಡಿಕೆ ಇಟ್ಟ ದರ್ಶನ್
ಮಂಜುನಾಥ ಸಿ.
|

Updated on: Sep 18, 2024 | 8:24 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 100 ದಿನಗಳಾಗಿವೆ. ಈ 100 ದಿನಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​ ಅನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಾಮವಾಗಿದ್ದ ದರ್ಶನ್, ಬಳ್ಳಾರಿ ಜೈಲಿನಲ್ಲಿ ಅದೇ ಆರಾಮವನ್ನು ನಿರೀಕ್ಷಿಸುತ್ತಿದ್ದಂತಿದ್ದು, ಪದೇ ಪದೇ ಜೈಲು ಅಧಿಕಾರಿಗಳ ಬಳಿ ಒಂದಲ್ಲ ಒಂದು ವಸ್ತುವಿಗೆ ಬೇಡಿಕೆ ಇಡುತ್ತಿದ್ದಾರೆ. ಆದರೆ ಜೈಲಧಿಕಾರಿಗಳು ಶಿಸ್ತು ಪಾಲನೆ ಮಾಡುತ್ತಿದ್ದು, ನಿಯಮ ಮೀರಿ ಏನನ್ನೂ ಕೊಡದೇ ಇರುವ ನಿರ್ಧಾರ ಮಾಡಿದ್ದಾರೆ.

ತಮ್ಮ ಬ್ಯಾರಕ್​ನಲ್ಲಿ ಟಿವಿ ಅಳವಡಿಸುವಂತೆ ದರ್ಶನ್ ಪದೇ ಪದೇ ಜೈಲಧಿಕಾರಿಗಳ ಬಳಿ ಕೇಳಿ ಕೊಂಡಿದ್ದರು. ಟಿವಿ ಅಳವಡಿಸಲಾಗಿತ್ತಾದರೂ ಆ ಟಿವಿ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹಲವು ದಿನಗಳಿಂದ ಈ ಬಗ್ಗೆ ಬೇಡಿಕೆ ಇಡುತ್ತಲೇ ಬಂದಿದ್ದ ದರ್ಶನ್​ಗೆ ಕೊನೆಗೂ ಜೈಲಧಿಕಾರಿಗಳು ಟಿವಿ ನೀಡಿದ್ದಾರೆ. ಇರುವುದರಲ್ಲೇ ಚೆನ್ನಾಗಿ ಕೆಲಸ ಮಾಡುವ ಟಿವಿಯೊಂದನ್ನು ದರ್ಶನ್​ ಇರುವ ಕೋಣೆಯಲ್ಲಿ ಅಳವಡಿಸಿದ್ದಾರೆ. ದರ್ಶನ್ ಕೋಣೆಯಲ್ಲಿ ಟಿವಿ ಅಳವಡಿಸಿದ್ದೇನೋ ಆಗಿದೆ, ಆದರೆ ದರ್ಶನ್​ ಕೇವಲ ಸರ್ಕಾರಿ ಚಾನೆಲ್​ಗಳನ್ನು ಮಾತ್ರವೇ ವೀಕ್ಷಿಸಬೇಕಿದೆ. ಯಾವುದೇ ಖಾಸಗಿ ಚಾನೆಲ್​ಗಳು ಪ್ರಸಾರವಾಗದಂತೆ ಮಾಡಿಫಿಕೇಷನ್ ಮಾಡಲಾಗಿದೆ.

ಇನ್ನು ದರ್ಶನ್, ಜೈಲಧಿಕಾರಿಗಳ ಬಳಿ ತಮಗೆ ಕುರ್ಚಿ ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ತಮ್ಮ ಕೋಣೆಯಲ್ಲಿ ಕೂರಲು ಕುರ್ಚಿ ಇಲ್ಲವೆಂದು ಬೆನ್ನು ನೋವಿನ ಸಮಸ್ಯೆ ಇರುವ ಕಾರಣ ಕೂರಲು ಕುರ್ಚಿ ಬೇಕಾಗಿದೆ ಎಂದು ದರ್ಶನ್ ಬೇಡಿಕೆ ಇಟ್ಟಿದ್ದಾರೆ. ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ಸಹ ನಟ ದರ್ಶನ್ ತಮಗೆ ಕುರ್ಚಿಯ ಅವಶ್ಯಕತೆ ಇದೆಯೆಂದು ನ್ಯಾಯಾಧೀಶರ ಬಳಿ ಕೇಳಿದ್ದಾರೆ. ಜೈಲಧಿಕಾರಿಗಳು ಕುರ್ಚಿ ಕೊಡುತ್ತಿಲ್ಲವೆಂದು ಸಹ ದರ್ಶನ್ ನ್ಯಾಯಾಧೀಶರ ಬಳಿ ಹೇಳಿದ್ದಾರೆ. ಆದರೆ ದರ್ಶನ್​ಗೆ ಚೇರು ಕೊಡಬೇಕೇ ಬೇಡವೆ ಎಂದು ಜೈಲು ಅಧಿಕಾರಿಗಳೇ ನಿರ್ಣಯ ಮಾಡಬೇಕಿದೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಹಾಕಲಿದ್ದಾರೆ. ಈಗಾಗಲೇ ದರ್ಶನ್ ಬಳಿ ಅಗತ್ಯ ಅರ್ಜಿಗಳಿಗೆ ವಕೀಲರು ಸಹಿ ಹಾಕಿಸಿಕೊಂಡು ಹೋಗಿದ್ದಾರೆ. ನಿನ್ನೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 30ರ ವರೆಗೆ ಮುಂದುವರೆಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ