AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಗೆ ಟಿವಿ ಏನೋ ಬಂತು, ಈಗ ಮತ್ತೊಂದು ಬೇಡಿಕೆ ಇಟ್ಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಲ್ಲಿ ದಿನ ದೂಡುತ್ತಿದ್ದು, ಇದೀಗ ಜೈಲು ಅಧಿಕಾರಿಗಳ ಬಳಿ ಹೊಸ ಬೇಡಿಕೆಯೊಂದನ್ನು ದರ್ಶನ್ ಇಟ್ಟಿದ್ದಾರೆ. ಇಷ್ಟು ದಿನ ಟಿವಿಗಾಗಿ ಒತ್ತಾಯಿಸಿದ್ದ ದರ್ಶನ್​ಗೆ ಟಿವಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಜೈಲಿಗೆ ಟಿವಿ ಏನೋ ಬಂತು, ಈಗ ಮತ್ತೊಂದು ಬೇಡಿಕೆ ಇಟ್ಟ ದರ್ಶನ್
ಮಂಜುನಾಥ ಸಿ.
|

Updated on: Sep 18, 2024 | 8:24 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 100 ದಿನಗಳಾಗಿವೆ. ಈ 100 ದಿನಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​ ಅನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಾಮವಾಗಿದ್ದ ದರ್ಶನ್, ಬಳ್ಳಾರಿ ಜೈಲಿನಲ್ಲಿ ಅದೇ ಆರಾಮವನ್ನು ನಿರೀಕ್ಷಿಸುತ್ತಿದ್ದಂತಿದ್ದು, ಪದೇ ಪದೇ ಜೈಲು ಅಧಿಕಾರಿಗಳ ಬಳಿ ಒಂದಲ್ಲ ಒಂದು ವಸ್ತುವಿಗೆ ಬೇಡಿಕೆ ಇಡುತ್ತಿದ್ದಾರೆ. ಆದರೆ ಜೈಲಧಿಕಾರಿಗಳು ಶಿಸ್ತು ಪಾಲನೆ ಮಾಡುತ್ತಿದ್ದು, ನಿಯಮ ಮೀರಿ ಏನನ್ನೂ ಕೊಡದೇ ಇರುವ ನಿರ್ಧಾರ ಮಾಡಿದ್ದಾರೆ.

ತಮ್ಮ ಬ್ಯಾರಕ್​ನಲ್ಲಿ ಟಿವಿ ಅಳವಡಿಸುವಂತೆ ದರ್ಶನ್ ಪದೇ ಪದೇ ಜೈಲಧಿಕಾರಿಗಳ ಬಳಿ ಕೇಳಿ ಕೊಂಡಿದ್ದರು. ಟಿವಿ ಅಳವಡಿಸಲಾಗಿತ್ತಾದರೂ ಆ ಟಿವಿ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹಲವು ದಿನಗಳಿಂದ ಈ ಬಗ್ಗೆ ಬೇಡಿಕೆ ಇಡುತ್ತಲೇ ಬಂದಿದ್ದ ದರ್ಶನ್​ಗೆ ಕೊನೆಗೂ ಜೈಲಧಿಕಾರಿಗಳು ಟಿವಿ ನೀಡಿದ್ದಾರೆ. ಇರುವುದರಲ್ಲೇ ಚೆನ್ನಾಗಿ ಕೆಲಸ ಮಾಡುವ ಟಿವಿಯೊಂದನ್ನು ದರ್ಶನ್​ ಇರುವ ಕೋಣೆಯಲ್ಲಿ ಅಳವಡಿಸಿದ್ದಾರೆ. ದರ್ಶನ್ ಕೋಣೆಯಲ್ಲಿ ಟಿವಿ ಅಳವಡಿಸಿದ್ದೇನೋ ಆಗಿದೆ, ಆದರೆ ದರ್ಶನ್​ ಕೇವಲ ಸರ್ಕಾರಿ ಚಾನೆಲ್​ಗಳನ್ನು ಮಾತ್ರವೇ ವೀಕ್ಷಿಸಬೇಕಿದೆ. ಯಾವುದೇ ಖಾಸಗಿ ಚಾನೆಲ್​ಗಳು ಪ್ರಸಾರವಾಗದಂತೆ ಮಾಡಿಫಿಕೇಷನ್ ಮಾಡಲಾಗಿದೆ.

ಇನ್ನು ದರ್ಶನ್, ಜೈಲಧಿಕಾರಿಗಳ ಬಳಿ ತಮಗೆ ಕುರ್ಚಿ ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ತಮ್ಮ ಕೋಣೆಯಲ್ಲಿ ಕೂರಲು ಕುರ್ಚಿ ಇಲ್ಲವೆಂದು ಬೆನ್ನು ನೋವಿನ ಸಮಸ್ಯೆ ಇರುವ ಕಾರಣ ಕೂರಲು ಕುರ್ಚಿ ಬೇಕಾಗಿದೆ ಎಂದು ದರ್ಶನ್ ಬೇಡಿಕೆ ಇಟ್ಟಿದ್ದಾರೆ. ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ಸಹ ನಟ ದರ್ಶನ್ ತಮಗೆ ಕುರ್ಚಿಯ ಅವಶ್ಯಕತೆ ಇದೆಯೆಂದು ನ್ಯಾಯಾಧೀಶರ ಬಳಿ ಕೇಳಿದ್ದಾರೆ. ಜೈಲಧಿಕಾರಿಗಳು ಕುರ್ಚಿ ಕೊಡುತ್ತಿಲ್ಲವೆಂದು ಸಹ ದರ್ಶನ್ ನ್ಯಾಯಾಧೀಶರ ಬಳಿ ಹೇಳಿದ್ದಾರೆ. ಆದರೆ ದರ್ಶನ್​ಗೆ ಚೇರು ಕೊಡಬೇಕೇ ಬೇಡವೆ ಎಂದು ಜೈಲು ಅಧಿಕಾರಿಗಳೇ ನಿರ್ಣಯ ಮಾಡಬೇಕಿದೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಹಾಕಲಿದ್ದಾರೆ. ಈಗಾಗಲೇ ದರ್ಶನ್ ಬಳಿ ಅಗತ್ಯ ಅರ್ಜಿಗಳಿಗೆ ವಕೀಲರು ಸಹಿ ಹಾಕಿಸಿಕೊಂಡು ಹೋಗಿದ್ದಾರೆ. ನಿನ್ನೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 30ರ ವರೆಗೆ ಮುಂದುವರೆಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್