AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ

Darshan Thoogudeepa: ಆರೋಪಿ ದರ್ಶನ್, ತಮಗೆ ಮನೆ ಊಟ ಬೇಕೆಂದು ಹೈಕೋರ್ಟ್​ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ. ಮನೆ ಊಟಕ್ಕೆ ಸಂಬಂಧಿಸಿದಂತೆ ಜೈಲಧಿಕಾರಿಗಳು ತಮ್ಮ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಿದ್ದಾರೆ.

ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ
ಮಂಜುನಾಥ ಸಿ.
|

Updated on: Aug 20, 2024 | 9:23 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್​ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ. ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯಲ್ಲಿ ಆರೋಗ್ಯದ ಕಾರಣ ನೀಡಿದ್ದರು. ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ನಡೆಸಲಿದೆ.

ಕಳೆದ ಬಾರಿ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಈ ಬಗ್ಗೆ ನಿರ್ಣಯ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈಗಾಗಲೇ ವರದಿ ಸಲ್ಲಿಕೆ ಆಗಲಿದ್ದು, ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ತನ್ನ ನಿರ್ಣಯ ಪ್ರಕಟಿಸುವ ಸಾಧ್ಯತೆ ಇದೆ. ಜೈಲು ಅಧಿಕಾರಿಗಳು, ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗಿದೆ. ಜೈಲಿನ ವೈದ್ಯಾಧಿಕಾರಿಗಳು ಸಹ ದರ್ಶನ್​ಗೆ ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಎಫ್​ಎಸ್​ಎಲ್ ವರದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಸುಮಾರು 200 ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ್ದು ಅವುಗಳಲ್ಲಿ ಸಾಂಧರ್ಭಿಕ ಸಾಕ್ಷಿಗಳು, ಡಿಜಿಟಲ್ ಸಾಕ್ಷಿಗಳು, ಸಿಸಿಟಿವಿ ಫುಟೇಜ್​ಗಳು ಇನ್ನೂ ಕೆಲವು ಹಲವು ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇವುಗಳ ಸತ್ಯಾಸತ್ಯತೆ ತಿಳಿಯಲು ಇವುಗಳನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅವುಗಳಲ್ಲಿ ಸುಮಾರು 70% ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಳು ಪೊಲೀಸರ ಕೈ ಸೇರಿವೆ. ಇನ್ನುಳಿದ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಹೈದರಾಬಾದ್​ಗೆ ಕಳಿಸಲಾಗಿರುವ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಉಪಕರಣಗಳು, ಸಿಸಿ ಕ್ಯಾಮೆರಾ, ಆಡಿಯೋ ಸ್ಯಾಂಪಲ್ಸ್, ಮೊಬೈಲ್ ಡೇಟಾ ರಿಪೋರ್ಟ್ ಎಫ್​ಎಸ್​ಎಲ್ ವರದಿಗಳು ಮಾತ್ರವೇ ಬರಬೇಕಿದೆ. ಇನ್ನು 30% ವರದಿಗಳು ಮಾತ್ರವೇ ಬರಬೇಕಿದ್ದು, ಈ ವರದಿಗಳು ಇದೇ ವಾರದಲ್ಲಿ ಪೊಲೀಸರ ಕೈ ಸೇರಲಿವೆ ಎನ್ನಲಾಗುತ್ತಿದೆ. ಡಿಜಿಟಲ್ ಡಾಟಾ ರಿಟ್ರೀವ್ ಮಾಡುವ ಡಿವೈಸ್​ಗಳಲ್ಲಿ ಐಫೋನ್​ಗಳು ಸಹ ಇದ್ದು, ಇವುಗಳ ಡಾಟಾ ರಿಟ್ರೀವ್​ಗೆ ಹೆಚ್ಚಿನ ಸಮಯ ಹಿಡಿಯುತ್ತಿದೆ ಎನ್ನಲಾಗುತ್ತಿದೆ.

ಈಗಾಗಲೇ ಚಾರ್ಜ್​ ಶೀಟ್ ತಯಾರಿ ಪ್ರಕ್ರಿಯೆ ಪ್ರಾರಂಭ ಆಗಿದ್ದು, ಎಫ್​ಎಸ್​ಎಲ್ ವರದಿ ಬಂದ ಬಳಿಕ ಚಾರ್ಜ್​ಶೀಟ್ ತಯಾರಿ ಪ್ರಕ್ರಿಯೆಗೆ ವೇಗ ಸಿಗಲಿದೆ. ಇನ್ನು 20 ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ದರ್ಶನ್​ ಹಾಗೂ ಸಂಗಡಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಕ್ಯಾಬ್ ಡ್ರೈವರ್ ಅನು ಕುಮಾರ್ ಸಹ ಜಾಮೀನು ಸಲ್ಲಿಕೆಗೆ ಸರ್ಜಿ ಸಲ್ಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ