Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
ಲ್ಯಾಂಬೋರ್ಗಿನಿ ಕಾರಲ್ಲಿ ಕಾಣಿಸಿಕೊಂಡ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 15, 2021 | 7:03 PM

ನಟ ದರ್ಶನ್​ ಅವರು ದೊಡ್ಡಮಟ್ಟದ ಅಭಿಮಾನಿಗಳನ್ನು ಹೊಂದಿದ್ದಾರೆ. ಇದಕ್ಕೆ ಕಾರಣ, ಅವರು ಅಭಿಮಾನಿಗಳ ಮೇಲೆ ತೋರುವ ಪ್ರೀತಿ. ಎಲ್ಲಾದರೂ ತೆರಳುವಾಗ ಫ್ಯಾನ್ಸ್​ ಸಿಕ್ಕರೆ ಅವರನ್ನು ಮಾತನಾಡಿಸಿಕೊಂಡೇ ಮುಂದೆ ಹೋಗೋದು ದರ್ಶನ್​ ರೂಢಿ. ಇಂದು ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಕಷ್ಟು ವೈರಲ್​ ಆಗುತ್ತಿದೆ.

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ವಿವಾದಗಳ ಕೇಂದ್ರಬಿಂದು ಆಗಿದ್ದು ಮೈಸೂರು. ಹೀಗಾಗಿ, ಬೆಂಗಳೂರಿನಿಂದ ದರ್ಶನ್​ ಮೈಸೂರಿಗೆ ತೆರಳಿದ್ದಾರೆ.  ಅದೂ ತಮ್ಮ ಲ್ಯಾಂಬೋರ್ಗಿನಿ ಕಾರಿನಲ್ಲಿ ಅನ್ನೋದು ವಿಶೇಷ.

ನಟ ದರ್ಶನ್ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ. ಹಳದಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್​ಅನ್ನು ತಾವೇ ಚಲಾಯಿಸಿಕೊಂಡು ಮೈಸೂರು ಕಡೆ ಹೊರಟಿದ್ದಾರೆ. ದಾರಿ ಮಧ್ಯೆ ಆಟೋದಲ್ಲಿ ಅವರಿಗೆ ಅಭಿಮಾನಿಗಳು ಎದುರಾಗಿದ್ದಾರೆ. ಈ ವೇಳೆ ದರ್ಶನ್​ ಅವರನ್ನು ಮಾತನಾಡಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ನಿರ್ಮಾಪಕ ಸಂದೇಶ್ ಅವರ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಇಂದ್ರಜಿತ್ ಸುದ್ದಿಗೋಷ್ಠಿ ಕರೆದು ಹೋಟೆಲ್ ಸಿಬ್ಬಂದಿ ಗಂಗಾಧರ ಮಾತ್ರವಲ್ಲ ಜುಲೈ 3ರಂದು ಗೋಪಾಲ್ ರಾಜ್ ಎಂಬುವವರ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಇಂದ್ರಜಿತ್ ಮಾಡಿದ್ದರು. ಆದರೆ ಇದು ಸುಳ್ಳು ಎಂದು ಗೋಪಾಲ್ ರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್

‘ದರ್ಶನ್​ ನನ್ನ ಮೇಲೆ ಹಲ್ಲೆ ಮಾಡಿಲ್ಲ, ನಾನು ಕೋಮಾದಲ್ಲೂ ಇಲ್ಲ, ಇಂದ್ರಜಿತ್​ ಲಂಕೇಶ್​ ಹೇಳಿಕೆ ಸುಳ್ಳು’

Published On - 6:56 pm, Thu, 15 July 21

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ