AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
ಲ್ಯಾಂಬೋರ್ಗಿನಿ ಕಾರಲ್ಲಿ ಕಾಣಿಸಿಕೊಂಡ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
TV9 Web
| Edited By: |

Updated on:Jul 15, 2021 | 7:03 PM

Share

ನಟ ದರ್ಶನ್​ ಅವರು ದೊಡ್ಡಮಟ್ಟದ ಅಭಿಮಾನಿಗಳನ್ನು ಹೊಂದಿದ್ದಾರೆ. ಇದಕ್ಕೆ ಕಾರಣ, ಅವರು ಅಭಿಮಾನಿಗಳ ಮೇಲೆ ತೋರುವ ಪ್ರೀತಿ. ಎಲ್ಲಾದರೂ ತೆರಳುವಾಗ ಫ್ಯಾನ್ಸ್​ ಸಿಕ್ಕರೆ ಅವರನ್ನು ಮಾತನಾಡಿಸಿಕೊಂಡೇ ಮುಂದೆ ಹೋಗೋದು ದರ್ಶನ್​ ರೂಢಿ. ಇಂದು ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಕಷ್ಟು ವೈರಲ್​ ಆಗುತ್ತಿದೆ.

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ವಿವಾದಗಳ ಕೇಂದ್ರಬಿಂದು ಆಗಿದ್ದು ಮೈಸೂರು. ಹೀಗಾಗಿ, ಬೆಂಗಳೂರಿನಿಂದ ದರ್ಶನ್​ ಮೈಸೂರಿಗೆ ತೆರಳಿದ್ದಾರೆ.  ಅದೂ ತಮ್ಮ ಲ್ಯಾಂಬೋರ್ಗಿನಿ ಕಾರಿನಲ್ಲಿ ಅನ್ನೋದು ವಿಶೇಷ.

ನಟ ದರ್ಶನ್ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ. ಹಳದಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್​ಅನ್ನು ತಾವೇ ಚಲಾಯಿಸಿಕೊಂಡು ಮೈಸೂರು ಕಡೆ ಹೊರಟಿದ್ದಾರೆ. ದಾರಿ ಮಧ್ಯೆ ಆಟೋದಲ್ಲಿ ಅವರಿಗೆ ಅಭಿಮಾನಿಗಳು ಎದುರಾಗಿದ್ದಾರೆ. ಈ ವೇಳೆ ದರ್ಶನ್​ ಅವರನ್ನು ಮಾತನಾಡಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ನಿರ್ಮಾಪಕ ಸಂದೇಶ್ ಅವರ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಇಂದ್ರಜಿತ್ ಸುದ್ದಿಗೋಷ್ಠಿ ಕರೆದು ಹೋಟೆಲ್ ಸಿಬ್ಬಂದಿ ಗಂಗಾಧರ ಮಾತ್ರವಲ್ಲ ಜುಲೈ 3ರಂದು ಗೋಪಾಲ್ ರಾಜ್ ಎಂಬುವವರ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಇಂದ್ರಜಿತ್ ಮಾಡಿದ್ದರು. ಆದರೆ ಇದು ಸುಳ್ಳು ಎಂದು ಗೋಪಾಲ್ ರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್

‘ದರ್ಶನ್​ ನನ್ನ ಮೇಲೆ ಹಲ್ಲೆ ಮಾಡಿಲ್ಲ, ನಾನು ಕೋಮಾದಲ್ಲೂ ಇಲ್ಲ, ಇಂದ್ರಜಿತ್​ ಲಂಕೇಶ್​ ಹೇಳಿಕೆ ಸುಳ್ಳು’

Published On - 6:56 pm, Thu, 15 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ