AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಕಿರಣ್​ ಸೂರ್ಯ
| Edited By: |

Updated on: Jul 02, 2024 | 12:38 PM

Share

ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್​ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಮಗುವಿಗೆ ಖೈದಿ ಪೊಟೋ ಶೂಟ್ ಮಾಡಿಸಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ‘ಶಿಕ್ಷಣ ಮುಖ್ಯ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಇದು ಸರಿ ಅಲ್ಲ’ ಎಂದು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಫ್ಯಾನ್ಸ್ ನಿತ್ಯ ಒಂದೊಂದು ಟ್ರೆಂಡ್ ಮಾಡಲಾಗುತ್ತಿದೆ. ಕೆಲವರು ಖೈದಿ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ