ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 02, 2024 | 12:38 PM

ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್​ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಮಗುವಿಗೆ ಖೈದಿ ಪೊಟೋ ಶೂಟ್ ಮಾಡಿಸಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ‘ಶಿಕ್ಷಣ ಮುಖ್ಯ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಇದು ಸರಿ ಅಲ್ಲ’ ಎಂದು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಫ್ಯಾನ್ಸ್ ನಿತ್ಯ ಒಂದೊಂದು ಟ್ರೆಂಡ್ ಮಾಡಲಾಗುತ್ತಿದೆ. ಕೆಲವರು ಖೈದಿ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ