AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಕಿರಣ್​ ಸೂರ್ಯ
| Edited By: |

Updated on: Jul 02, 2024 | 12:38 PM

Share

ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್​ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಮಗುವಿಗೆ ಖೈದಿ ಪೊಟೋ ಶೂಟ್ ಮಾಡಿಸಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ‘ಶಿಕ್ಷಣ ಮುಖ್ಯ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಇದು ಸರಿ ಅಲ್ಲ’ ಎಂದು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಫ್ಯಾನ್ಸ್ ನಿತ್ಯ ಒಂದೊಂದು ಟ್ರೆಂಡ್ ಮಾಡಲಾಗುತ್ತಿದೆ. ಕೆಲವರು ಖೈದಿ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ