AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ದರ್ಶನ್ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ; ವಿಡಿಯೋ ವೈರಲ್

ನ್ಸ್​ ಡಿ ಬಾಸ್​ ಮೇಲಿರುವ ಅಭಿಮಾನ ತೋರುತ್ತಿದ್ದಾರೆ. ತುಮಕೂರಿನ ಚಿತ್ರಮಂದಿರದಲ್ಲಿ ದರ್ಶನ್​ ಕಟೌಟ್​ಗೆ ಅಭಿಮಾನಿಗಳು ಬಿಯರ್​ನಿಂದ ಅಭಿಷೇಕ ಮಾಡಿಸಿದ್ದಾರೆ.

Roberrt Movie: ದರ್ಶನ್ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ; ವಿಡಿಯೋ ವೈರಲ್
ಬಿಯರ್​ ಸುರಿಯುತ್ತಿರುವ ಅಭಿಮಾಣಿಗಳು
ರಾಜೇಶ್ ದುಗ್ಗುಮನೆ
|

Updated on:Mar 11, 2021 | 12:49 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಇಂದು (ಮಾರ್ಚ್​​ 11) ರಿಲೀಸ್​ ಆಗಿದೆ. ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಪ್ರದರ್ಶನ ಕಂಡಿದೆ. ಸಿನಿಮಾ ಬಗ್ಗೆ ಪಾಸಿಟಿವ್​ ವಿಮರ್ಷೆಗಳು ಬರುತ್ತಿದ್ದು, ಅಭಿಮಾನಿಗಳು ಸಖತ್​ ಖುಷಿ ಆಗಿದ್ದಾರೆ. ಈ ಮಧ್ಯೆ ಫ್ಯಾನ್ಸ್​ ಡಿ ಬಾಸ್​ ಮೇಲಿರುವ ಅಭಿಮಾನ ತೋರುತ್ತಿದ್ದಾರೆ. ತುಮಕೂರಿನ ಚಿತ್ರಮಂದಿರದಲ್ಲಿ ದರ್ಶನ್​ ಕಟೌಟ್​ಗೆ ಅಭಿಮಾನಿಗಳು ಬಿಯರ್​ನಿಂದ ಅಭಿಷೇಕ ಮಾಡಿದ್ದಾರೆ. ಸಾಮಾನ್ಯವಾಗಿ ಅಭಿಮಾನಿಗಳು ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಹೂವಿನ ಮಳೆ ಸುರಿಯುವುದು ಸಾಮಾನ್ಯ. ಆದರೆ, ತುಮಕೂರಿನಲ್ಲಿ ಅಭಿಮಾನಿಗಳು ಚಿತ್ರಮಂದಿರದ ಎದುರು ದರ್ಶನ್​ ಫೋಟೋ ಹಾಗೂ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

ಜೆಪಿ ನಗರದಲ್ಲಿ 13 ಕಟೌಟ್ಸ್​ ಬೆಂಗಳೂರಿನ ಹಲವು ಚಿತ್ರಮಂದರಿಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಂಡಿದೆ. ಜೆಪಿ ನಗರದ ಸಿದ್ಧೇಶ್ವರ ಥಿಯೇಟರ್​​ನಲ್ಲಿ ಫ್ಯಾನ್ಸ್ ಬರೋಬ್ಬರಿ 13 ಕಟೌಟ್ ಹಾಕಿದ್ದಾರೆ. ಒಂದೊಂದು ಕಟೌಟ್ಒಂ ದೊಂದು ರೀತಿ ಇದೆ. ದರ್ಶನ ಅಭಿನಯಿಸಿರುವ ಸಿನಿಮಾಗಳ ಪಾತ್ರಗಳ ಗೆಟಪ್​ನಲ್ಲಿ ಕಟೌಟ್ಸ್ ಸಿದ್ಧಗೊಂಡಿದೆ.

ಭರ್ಜರಿ ಕಲೆಕ್ಷನ್​ ಸಾಧ್ಯತೆ ಗುರುವಾರ ಶಿವರಾತ್ರಿ ಪ್ರಯುಕ್ತ ರಜೆ ಇದೆ. ಹೀಗಾಗಿ ದೊಡ್ಡ ಸಂಖ್ಯೆಯಲ್ಲೇ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಾರೆ. ಶುಕ್ರವಾರ ಚಿತ್ರರಂಗದ ಪಾಲಿಗೆ ವಿಶೇಷ ದಿನ. ಹೀಗಾಗಿ, ಅಂದು ಕೂಡ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಾರೆ. ಇನ್ನು, ಶನಿವಾರ-ಭಾನುವಾರ ವೀಕೆಂಡ್​ ಆದ್ದರಿಂದ ಅಂದು ಕೂಡ ದರ್ಶನ್​ ಸಿನಿಮಾ ಬಾಕ್ಸ್​ ಆಫೀಸ್​ ಧೂಳೆಬ್ಬಿಸುವ ಲಕ್ಷಣ ಇದೆ. ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಬಾ.. ಬಾ.. ನಾ ರೆಡಿ ಅಂದ ರಾಬರ್ಟ್.. ಚಿತ್ರಮಂದಿರಗಳ ಗ್ಲಾಸ್ ಪುಡಿ ಪುಡಿ, ದರ್ಶನ್ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್

Published On - 12:47 pm, Thu, 11 March 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್