AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಮೇಲಿನ ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಿಗೆ ಪಶ್ಚಾತ್ತಾಪ; ಯಾರಿಂದಲೂ ಸಿಗುತ್ತಿಲ್ಲ ಬೆಂಬಲ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದರ್ಶನ್​ಗೆ ಉಪಕಾರ ಮಾಡಲು ಹೋದವರಿಗೆ ಸಂಕಷ್ಟ ಹೆಚ್ಚಿದೆ.

ದರ್ಶನ್​ ಮೇಲಿನ ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಿಗೆ ಪಶ್ಚಾತ್ತಾಪ; ಯಾರಿಂದಲೂ ಸಿಗುತ್ತಿಲ್ಲ ಬೆಂಬಲ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 15, 2024 | 8:42 AM

Share

ನಟ ದರ್ಶನ್ (Darshan) ಅವರ ಮೇಲಿನ ಅತಿರೇಕದ ಅಭಿಮಾನದಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ದರ್ಶನ್ ಗ್ಯಾಂಗ್ ಈಗ ಜೈಲು ಸೇರಿದೆ. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಈಗ ಅವರೆಲ್ಲರಿಗೂ ಪಶ್ಚಾತಾಪ ಕಾಡುತ್ತಿದೆ. ಜೈಲು ಸೇರಿದವರಿಗೆ ಯಾಕಾದರೂ ಈ ಪ್ರಕರಣದಲ್ಲಿ ಸಿಲುಕಿದೆನೋ ಎಂದೆನಿಸುತ್ತಿದೆ. ಅನೇಕರಿಗೆ ಮನೆಯವರ ಸಹಾಯ ಕೂಡ ಸಿಗದೆ ಕಂಗಾಲಾಗಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದು ಅನುಕುಮಾರ್​ಗೆ ಸಾಕಷ್ಟು ನೋವು ತಂದಿದೆ. ದರ್ಶನ್​ಗೆ ಉಪಕಾರ ಮಾಡಲು ಹೋದವರಿಗೆ ಸಂಕಷ್ಟ ಹೆಚ್ಚಿದೆ. ಬಾಸ್ ಎಂದು ಕಂಬಿ ಹಿಂದೆ ಸೇರಿದವರ ಕುಟುಂಬಗಳು ಕಣ್ಣೀರು ಹಾಕುತ್ತಿವೆ.

ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಲ್ಲಿ ಪಶ್ಚಾತ್ತಾಪ ಕಾಡುತ್ತಿದೆ. ಆರೋಪಿಗಳಿಗೆ ಮನೆಯವರಿಂದಲೂ ಬೆಂಬಲ ಸಿಗುತ್ತಿಲ್ಲ. ಕೆಲವು ಕುಟುಂಬದವರಿಗೆ ಮಗನೇ ಆಧಾರ ಆಗಿದ್ದ. ಈಗ ಅವನು ಜೈಲು ಸೇರಿರುವದರಿಂದ ಮನೆಯವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಯಾಕಾದರೂ ಅಭಿಮಾನ‌ ಅಂತ ಓಡಾಡಿದ್ವೋ ಅನ್ನೋ ಬೇಸರ ಅವರನ್ನು ಕಾಡುತ್ತಿದೆ.

ಇದನ್ನೂ ಓದಿ: ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ

ರೇಣುಕಾ ಸ್ವಾಮಿ ಎಂಬ ಫಾರ್ಮಸಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ. ಈ ಕಾರಣಕ್ಕೆ ಆತನ ಕೊಲೆ ಆಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ಪ್ರಮುಖ ಸಾಕ್ಷಿಗಳು ಸಿಕ್ಕಿದ್ದರಿಂದಲೇ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರನ್ನು ಬಿಡಿಸಲು ಅನೇಕರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು