AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಮೇಲಿನ ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಿಗೆ ಪಶ್ಚಾತ್ತಾಪ; ಯಾರಿಂದಲೂ ಸಿಗುತ್ತಿಲ್ಲ ಬೆಂಬಲ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದರ್ಶನ್​ಗೆ ಉಪಕಾರ ಮಾಡಲು ಹೋದವರಿಗೆ ಸಂಕಷ್ಟ ಹೆಚ್ಚಿದೆ.

ದರ್ಶನ್​ ಮೇಲಿನ ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಿಗೆ ಪಶ್ಚಾತ್ತಾಪ; ಯಾರಿಂದಲೂ ಸಿಗುತ್ತಿಲ್ಲ ಬೆಂಬಲ
ದರ್ಶನ್
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on: Jun 15, 2024 | 8:42 AM

ನಟ ದರ್ಶನ್ (Darshan) ಅವರ ಮೇಲಿನ ಅತಿರೇಕದ ಅಭಿಮಾನದಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ದರ್ಶನ್ ಗ್ಯಾಂಗ್ ಈಗ ಜೈಲು ಸೇರಿದೆ. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಈಗ ಅವರೆಲ್ಲರಿಗೂ ಪಶ್ಚಾತಾಪ ಕಾಡುತ್ತಿದೆ. ಜೈಲು ಸೇರಿದವರಿಗೆ ಯಾಕಾದರೂ ಈ ಪ್ರಕರಣದಲ್ಲಿ ಸಿಲುಕಿದೆನೋ ಎಂದೆನಿಸುತ್ತಿದೆ. ಅನೇಕರಿಗೆ ಮನೆಯವರ ಸಹಾಯ ಕೂಡ ಸಿಗದೆ ಕಂಗಾಲಾಗಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದು ಅನುಕುಮಾರ್​ಗೆ ಸಾಕಷ್ಟು ನೋವು ತಂದಿದೆ. ದರ್ಶನ್​ಗೆ ಉಪಕಾರ ಮಾಡಲು ಹೋದವರಿಗೆ ಸಂಕಷ್ಟ ಹೆಚ್ಚಿದೆ. ಬಾಸ್ ಎಂದು ಕಂಬಿ ಹಿಂದೆ ಸೇರಿದವರ ಕುಟುಂಬಗಳು ಕಣ್ಣೀರು ಹಾಕುತ್ತಿವೆ.

ಅತಿರೇಕದ ಅಭಿಮಾನದಿಂದ ಜೈಲು ಸೇರಿದ ಆರೋಪಿಗಳಲ್ಲಿ ಪಶ್ಚಾತ್ತಾಪ ಕಾಡುತ್ತಿದೆ. ಆರೋಪಿಗಳಿಗೆ ಮನೆಯವರಿಂದಲೂ ಬೆಂಬಲ ಸಿಗುತ್ತಿಲ್ಲ. ಕೆಲವು ಕುಟುಂಬದವರಿಗೆ ಮಗನೇ ಆಧಾರ ಆಗಿದ್ದ. ಈಗ ಅವನು ಜೈಲು ಸೇರಿರುವದರಿಂದ ಮನೆಯವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಯಾಕಾದರೂ ಅಭಿಮಾನ‌ ಅಂತ ಓಡಾಡಿದ್ವೋ ಅನ್ನೋ ಬೇಸರ ಅವರನ್ನು ಕಾಡುತ್ತಿದೆ.

ಇದನ್ನೂ ಓದಿ: ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ

ರೇಣುಕಾ ಸ್ವಾಮಿ ಎಂಬ ಫಾರ್ಮಸಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ. ಈ ಕಾರಣಕ್ಕೆ ಆತನ ಕೊಲೆ ಆಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ಪ್ರಮುಖ ಸಾಕ್ಷಿಗಳು ಸಿಕ್ಕಿದ್ದರಿಂದಲೇ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರನ್ನು ಬಿಡಿಸಲು ಅನೇಕರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು