AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷೆ ಆಗುವ ನಂಬಿಕೆಯಿದೆ: ದರ್ಶನ್​ಗೆ ಬೇಲ್ ಸಿಕ್ಕ ಬಳಿಕ ರೇಣುಕಾಸ್ವಾಮಿ ತಂದೆ ಹೇಳಿಕೆ

ಹೈಕೋರ್ಟ್​ನಲ್ಲಿ ಇಂದು (ಡಿಸೆಂಬರ್​ 13) ದರ್ಶನ್​, ಪವಿತ್ರಾ ಗೌಡ, ಜಗದೀಶ್​, ಅನುಕುಮಾರ್​, ಪ್ರದೋಶ್, ಲಕ್ಷ್ಮಣ್, ನಾಗರಾಜ್​ ಅವರಿಗೆ ಜಾಮೀನು ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್​ ಸಿಕ್ಕಂತಾಗಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶಿಕ್ಷೆ ಆಗುವ ನಂಬಿಕೆಯಿದೆ: ದರ್ಶನ್​ಗೆ ಬೇಲ್ ಸಿಕ್ಕ ಬಳಿಕ ರೇಣುಕಾಸ್ವಾಮಿ ತಂದೆ ಹೇಳಿಕೆ
ಕಾಶಿನಾಥಯ್ಯ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 13, 2024 | 4:10 PM

Share

ನಟ ದರ್ಶನ್ ಮತ್ತು ಅವರ ಗ್ಯಾಂಗ್​ನವರಿಗೆ ಜಾಮೀನು ನೀಡಲಾಗಿದೆ. ರೇಣಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎಲ್ಲ ಆರೋಪಿಗಳಿಗೆ ಸದ್ಯಕ್ಕೆ ರಿಲೀಫ್​ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರೇಣಕಾಸ್ವಾಮಿ ಅವರ ತಂದೆ ಕಾಶೀನಾಥಯ್ಯ ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ್ದಾರೆ. ‘ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಮಂಜೂರು ಬಗ್ಗೆ ಮಾಧ್ಯಮಗಳಿಂದ ತಿಳಿದಿದೆ. ವಿಚಾರಣೆ ಬಳಿಕ ಸೂಕ್ತ ನ್ಯಾಯ ಸಿಗುವ ನಂಬಿಕೆಯಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಆಗಿರಬಹುದು. ಆದರೆ ಅಂತಿಮವಾಗಿ ಆರೋಪಿಗಳಿಗೆ ಶಿಕ್ಷೆ ಆಗುವ ನಂಬಿಕೆಯಿದೆ’ ಎಂದು ಕಾಶಿನಾಥಯ್ಯ ಅವರು ಹೇಳಿದ್ದಾರೆ.

‘ಸರ್ಕಾರ ನಮ್ಮ ಸೊಸೆ ಸಹನಾಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಹೇಳುತ್ತಾ ಕಾಶೀನಾಥಯ್ಯ ಅವರು ಭಾವುಕರಾಗಿದ್ದಾರೆ. ‘ದರ್ಶನ್ ನಮ್ಮ ಜತೆ ಮಾತುಕತೆಗೆ ಬರುವ ವಿಚಾರ ಇಲ್ಲ. ದರ್ಶನ್ ಜತೆ ಮಾತನಾಡುವಂಥದ್ದು ಏನೂ ಇಲ್ಲ. ನಾವು ಮಗನ ಕಳೆದುಕೊಂಡು ದುಖ:ದಲ್ಲಿದ್ದೇವೆ. ನಮಗೆ ಮಗ ಬೇಕೆ ಹೊರತು ಮಾತುಕತೆ ಏನೂ ಬೇಕಿಲ್ಲ’ ಎಂದು ಕಾಶಿನಾಥಯ್ಯ ಅವರು ಹೇಳಿದ್ದಾರೆ.

‘ಈವರೆಗೆ ನಮಗೆ ಮಾತುಕತೆಗೆಂದು ಯಾರೂ ಸಂಪರ್ಕ ಮಾಡಿಲ್ಲ. ಮಾತುಕತೆಗೆಂದು ನಮ್ಮ ಸಂಪರ್ಕ ಮಾಡಲು ಅವಕಾಶ ಇಲ್ಲ. ನಾವು ದರ್ಶನ್ ಜತೆ ಮಾತುಕತೆ ಬಗ್ಗೆ ಅಪೇಕ್ಷೆಪಡಲ್ಲ. ಸಿಎಂ ಭೇಟಿ ಮಾಡಿ ಮನವಿ ಮಾಡುವ ಬಗ್ಗೆ ಆಪ್ತರ ಜತೆ ಚರ್ಚಿಸುತ್ತೇವೆ. ಸರ್ಕಾರ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದೆ. ಜಾಮೀನು ಪ್ರಶ್ನಿಸಿ ಸಹ ಸುಪ್ರೀಂ ಮೊರೆ ಹೋಗುವ ವಿಶ್ವಾಸವಿದೆ. ಸಿಎಂ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಲ್ಲ, ಯೋಚಿಸುತ್ತೇವೆ’ ಎಂದಿದ್ದಾರೆ ಕಾಶಿನಾಥಯ್ಯ.

ಇದನ್ನೂ ಓದಿ:  ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಕಾರಣದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಲಾಗಿತ್ತು. ಈ ಹಲ್ಲೆಯಿಂದಾಗಿ ಆತ ಮೃತಪಟ್ಟ ಎಂಬ ಆರೋಪಿ ಇದೆ. ಈ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್​ ಎ2 ಆಗಿದ್ದಾರೆ. ಅವರಿಗೆ ಈಗ ಜಾಮೀನು ಸಿಕ್ಕಿದೆ. ಆದರೆ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ