AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ರಿಲ್ಯಾಕ್ಸ್ ಆದ ದರ್ಶನ್; ಮಗನ ಬರ್ತ್​ಡೇ ಆಚರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿದ್ದ ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ದೊರೆತಿರುವುದು ಸುದ್ದಿ ಮಾಡಿದೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಅವರಿಗೆ ಅವಕಾಶ ನೀಡಲಾಗಿದೆ. ಜೈಲಿನಿಂದ ಬಿಡುಗಡೆಯಾದ ದರ್ಶನ್ ಅವರು ಮಗನ ಹುಟ್ಟುಹಬ್ಬ ಆಚರಿಸಿದ್ದಾರೆ. ಆದಾಗ್ಯೂ, ಆರು ವಾರಗಳ ಬಳಿಕ ಅವರು ಮತ್ತೆ ಜೈಲಿಗೆ ಹಾಜರಾಗಬೇಕಿದೆ.

ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ರಿಲ್ಯಾಕ್ಸ್ ಆದ ದರ್ಶನ್; ಮಗನ ಬರ್ತ್​ಡೇ ಆಚರಣೆ
ಕುಟುಂಬದ ಜೊತೆ ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 31, 2024 | 6:58 AM

Share

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಈಗ ಜೈಲಿನಿಂದ ಹೊರ ಬಂದಿರೋ ಅವರು ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ತೆರಳಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಇಂದು (ಅಕ್ಟೋಬರ್ 31) ಮಗ ವಿನೀಶ್ ಜನ್ಮದಿನ. ಈ ವಿಶೇಷ ದಿನಕ್ಕೆ ಸರಿಯಾಗಿ ಅವರು ಮನೆಗೆ ಬಂದಿದ್ದಾರೆ.

ಬಳ್ಳಾರಿಯಿಂದ ಕಾರಿನಲ್ಲಿ ಪತ್ನಿ ಜೊತೆ ಹೊಸಕೆರೆಹಳ್ಳಿ ನಿವಾಸಕ್ಕೆ ದರ್ಶನ್ ಆಗಮಿಸಿದ್ದಾರೆ. ದರ್ಶನ್ ಅವರನ್ನು ನೋಡಲು ಫ್ಯಾನ್ಸ್ ನೆರೆದಿದ್ದರು. ಅವರಿಂದ ತಪ್ಪಿಸಿಕೊಂಡು ದರ್ಶನ್ ಮನೆ ಸೇರಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಬಾರದು ಎನ್ನುವ ಕಾರಣಕ್ಕೆ ದರ್ಶನ್​ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.

ಬರ್ತ್​ಡೇ ಆಚರಣೆ

ಮಗ ವಿನೀಶ್​ಗೆ ಇಂದು ಜನ್ಮದಿನ. ಹೀಗಾಗಿ, ರಾತ್ರಿ ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ. ಮಗನ ಜೊತೆಯೇ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆ ಬಳಿಕ ಊಟ ಮಾಡಿ ವಿಶ್ರಾಂತಿ ಪಡೆದಿದ್ದಾರೆ. ಹಲವು ತಿಂಗಳ ಬಳಿಕ ಬೆಡ್​ನಲ್ಲಿ ಅವರು ಹಾಯಾಗಿ ನಿದ್ರಿಸಿದ್ದಾರೆ. ಈ ದಿನಕ್ಕಾಗಿ ಅವರು ಕಳೆದ ನಾಲ್ಕೂವರೆ ತಿಂಗಳಿಂದ ಕಾಯುತ್ತಿದ್ದರು.

ಇದನ್ನೂ ಓದಿ: ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು

ಆಸ್ಪತ್ರೆಗೆ

ದರ್ಶನ್ ಅವರು ಜೈಲಿನಿಂದ ಹೊರ ಬಂದಿದ್ದು ವೈದ್ಯಕೀಯ ಚಿಕಿತ್ಸೆಗಾಗಿ. ಹೀಗಾಗಿ, ಅವರು ಆದಷ್ಟು ಬೇಗ ಆಸ್ಪತ್ರೆಗೆ ತೆರಳಬೇಕಿದೆ. ಇಂದು (ಅಕ್ಟೋಬರ್ 31) ಮಧ್ಯಾಹ್ನ ಅವರು ಆಸ್ಪತ್ರೆಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಆ ಬಳಿಕ ಅವರು ವೈದ್ಯರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರು ಎಲ್ಲಿ ಬೇಕಿದ್ದರೂ ಚಿಕಿತ್ಸೆ ಪಡೆಯಲು ಅವಕಾಶ ಇದೆ.

ಸೆಲೆಬ್ರೇಷನ್

ದರ್ಶನ್ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಕೆಲವು ಕಡೆಗಳಲ್ಲಿ ಪಟಾಕಿ ಕೂಡ ಸಿಡಿಸಲಾಗಿದೆ. ಸದ್ಯದ ಮಟ್ಟಿಗೆ ಇದು ಮಧ್ಯಂತರ ಜಾಮೀನು. ಅವರು ಆರು ವಾರಗಳ ಬಳಿಕ ಮತ್ತೆ ಜೈಲು ಸೇರಬೇಕಿದೆ. ಅಲ್ಲಿಯವರೆಗೆ ಅವರ ಆರೋಗ್ಯ ಯಾವ ರೀತಿಯಲ್ಲಿ ಚೇತರಿಕೆ ಕಾಣುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ