‘ದರ್ಶನ್​ಗೂ ಇತರೆ ವಿಚಾರಣಾಧೀನ ಖೈದಿಗಳಿಗೂ ವ್ಯತ್ಯಾಸವಿಲ್ಲ’; ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಚಾಟಿ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ಇಂದು (ಜುಲೂ 31) ನಡೆದಿದೆ. ಈ ವೇಳೆ ವಾದ-ಪ್ರತಿವಾದ ನಡೆದಿದೆ.

‘ದರ್ಶನ್​ಗೂ ಇತರೆ ವಿಚಾರಣಾಧೀನ ಖೈದಿಗಳಿಗೂ ವ್ಯತ್ಯಾಸವಿಲ್ಲ’; ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಚಾಟಿ
ದರ್ಶನ್
Edited By:

Updated on: Jul 31, 2024 | 2:07 PM

ಮನೆ ಊಟ, ಹಾಸಿಗೆ, ಚಮಚವನ್ನು ನೀಡಿ ಎಂದು ದರ್ಶನ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿತ್ತು. ಇದನ್ನು ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ಇಂದು (ಜುಲೂ 31) ನಡೆದಿದೆ. 10 ದಿನಗಳೊಳಗೆ ಜೈಲು ಅಧಿಕಾರಿಗಳು ತೀರ್ಮಾನ ಕೈಗೊಂಡು ಕೋರ್ಟ್​ಗೆ ತಿಳಿಸಬೇಕು ಎಂದಿರುವ ಕೋರ್ಟ್ ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿದೆ.

‘ದರ್ಶನ್​ಗೆ ಬೆನ್ನು ನೋವಿದೆ, ಜ್ವರ ಇದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ‘ಅನಾರೋಗ್ಯ ತುಂಬಾ ಬಿಗಡಾಯಿಸಿದ್ದರೆ ಅದನ್ನು ಜೈಲು ವೈದ್ಯರು ಪರಿಗಣಿಸುತ್ತಾರೆ. ವೈದ್ಯರು ಏನು ಸೂಚಿಸುತ್ತಾರೋ ಅದನ್ನು ಜೈಲಿನಲ್ಲಿ ನೀಡುತ್ತಾರೆ. ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಆಹಾರ ಕೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಹೇಳಿತು.

‘ದರ್ಶನ್​ಗೆ ಪೌಷ್ಟಿಕ ಆಹಾರ ನೀಡಬೇಕೆಂದು ಜೈಲಿನ ವೈದ್ಯಾಧಿಕಾರಿಯೂ ಸಲಹೆ ನೀಡಿದ್ದಾರೆ’ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಜಡ್ಜ್ ‘ಸಾವಿರಾರು ವಿಚಾರಣಾಧೀನ ಖೈದಿಗಳಿಗೆ ಪೌಷ್ಟಿಕ ಆಹಾರದ ಅಗತ್ಯ ಇರಬಹುದು. ದರ್ಶನ್​ಗೂ ಇತರೆ ವಿಚಾರಣಾಧೀನ ಕೈದಿಗಳಿಗೂ ವ್ಯತ್ಯಾಸವಿಲ್ಲ’ ಎಂದಿದ್ದಾರೆ.

‘ವಿಚಾರಣಾಧೀನ ಖೈದಿಗಳು ಖಾಸಗಿಯಾಗಿ ಆಹಾರ ತರಿಸಿಕೊಳ್ಳಬಹುದು. ಜೈಲು ಅಧಿನಿಯಮ ಸೆಕ್ಷನ್ 30ರ ಅಡಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ಜೈಲು ಕೈಪಿಡಿ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನಿರಾಕರಿಸಿದೆ. ಜೈಲು ಕೈಪಿಡಿಗೆ ಕಾನೂನಿನ ಬೆಂಬಲವಿಲ್ಲ. ಕೈಪಿಡಿಯಲ್ಲಿರುವುದು ಕೇವಲ ಆಡಳಿತಾತ್ಮಕ ನಿಯಮಗಳಷ್ಟೇ’ ಎಂದು ಪ್ರಭುಲಿಂಗ್ ನಾವದಗಿ ವಾದ ಮಾಡಿದರು.

‘ದರ್ಶನ್ ಮನವಿ ಸಲ್ಲಿಸಿದರೆ ಕಾನೂನಿನ ಅನ್ವಯವೇ ಪರಿಗಣಿಸಲಾಗುವುದು’ ಎಂದು ಸರ್ಕಾರದ ಪರ ಎಸ್ ಪಿಪಿ ಬೆಳ್ಳಿಯಪ್ಪ ಹೇಳಿಕೆ ನೀಡಿದರು. ‘10 ದಿನಗಳೊಳಗೆ ಜೈಲು ಅಧಿಕಾರಿಗಳು ತೀರ್ಮಾನ ತೆಗೆದುಕೊಂಡು ಕೋರ್ಟ್​ಗೆ ತಿಳಿಸಬೇಕು’ ಎಂದು ಕೋರ್ಟ್ ಸೂಚಿಸಿದೆ.

ಸರ್ಕಾರದ ಮುಖ್ಯ ಅಭಿಯೋಜಕ ಬೆಳ್ಳಿಯಪ್ಪಗೆ ಕೋರ್ಟ್ ಕೆಲ ಪ್ರಶ್ನೆಗಳನ್ನು ಕೇಳಿದೆ. ‘ರಾಗಿ ಮುದ್ದೆ ಗೋಡೆಗೆ ಹೊಡೆದರೆ ಹಿಂದಿರುಗುತ್ತದೆ ಎಂದು ಕೋರ್ಟ್​ಗೆ ಖೈದಿಯೊಬ್ಬ ಅರ್ಜಿ ಸಲ್ಲಿಸಿದ್ದ. ನೀವು ಅಂತಹ ಆಹಾರ ನೀಡುತ್ತಿದ್ದೀರಾ’ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಬೆಳ್ಳಿಯಪ್ಪ, ‘ಜೈಲು ಕೈಪಿಡಿ ಪ್ರಕಾರವೇ ಆಹಾರ ನೀಡಲಾಗುತ್ತಿದೆ’ ಎಂದರು.

ಇದನ್ನೂ ಓದಿ: ಸನ್ನಡತೆ ಆಧಾರದಲ್ಲಿ ಬಿಡುಗಡೆ; ದರ್ಶನ್ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದ ಅಭಿಮಾನಿ ಮತ್ತೆ ಜೈಲಿಗೆ?

‘ಜೈಲು ಅಧಿಕಾರಿಗಳಿಗೆ ದರ್ಶನ್ ಮನವಿ ಸಲ್ಲಿಸಿದ್ದಾರೆ. ಅದನ್ನು ಪರಿಗಣಿಸಲು ಒಂದು ವಾರ ಕಾಲಾವಕಾಶ ಕೊಡಿ. ಮನವಿಯನ್ನು ಮಾನವೀಯತೆಯಿಂದ ಅಧಿಕಾರಿಗಳು ಪರಿಗಣಿಸಲಿ’ ಎಂದು ದರ್ಶನ್ ಪರ ವಕೀಲರು ಕೋರಿದರು. ‘ಎಲ್ಲ ಕೈದಿಗಳ ಬಗ್ಗೆಯೂ ಇದೇ ಮಾನವೀಯತೆ ಇರಬೇಕು. ಸೆಲೆಬ್ರಿಟಿ ಎಂದು ಬೇರೆ ನಿಯಮಗಳು ಇರುವುದಿಲ್ಲ. ಜೈಲು ಅಧಿನಿಯಮದಲ್ಲಿ ಅನುಸರಿಸಬೇಕಾದ ನಿಯಮಗಳಿಲ್ಲ. ಹೀಗಾಗಿಯೇ ಜೈಲು ಕೈಪಿಡಿಯಲ್ಲಿ ನಿಯಮ ರಚಿಸಲಾಗಿದೆ.‌ ಉದ್ಭವಿಸಿರುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತೇವೆ. ಜೈಲಿನಲ್ಲಿ ಶ್ರೀಮಂತ ಖೈದಿ ಬಡ ಖೈದಿ ಎಂಬ ತಾರತಮ್ಯ ಇರಬಾರದು ಎಂದು ಕೋರ್ಟ್​ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us