Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?

ಕೊಲೆ ಆರೋಪಿ ನಟ ದರ್ಶನ್​​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ.

ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?
ದರ್ಶನ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಾಜೇಶ್ ದುಗ್ಗುಮನೆ

Updated on:Sep 03, 2024 | 3:05 PM

ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ವಿಚಾರಣಾಧೀನ ಖೈದಿ ನಂ. 6106 ನೀಡಲಾಗಿತ್ತು. ಇದನ್ನು ಫ್ಯಾನ್ಸ್ ಸಂಭ್ರಮಿಸಿ ಹಚ್ಚೆ ಹಾಕಿಸಿಕೊಂಡಿದ್ದರು. ಕೆಲವರು ಕಾರುಗಳಿಗೆ ಈ ಸಂಖ್ಯೆಯನ್ನು ಬರೆದುಕೊಂಡಿದ್ದರು. ಈಗ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್​ ಆಗಲಿದ್ದಾರೆ. ಇದರಿಂದ ಅವರು ವಿಚಾರಣಾಧೀನ ಖೈದಿ ಸಂಖ್ಯೆ ಕೂಡ ಬದಲಾಗಲಿದೆ. ಈಗ ದರ್ಶನ್ ಫ್ಯಾನ್ಸ್ ಮತ್ತೆ ಹಚ್ಚೆ ಹಾಕಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಫ್ಯಾನ್ಸ್ ದರ್ಶನ್​ನ ಮೇಲೆ ಅಂಧಾಭಿಮಾನ ತೋರಿಸುತ್ತಿದ್ದಾರೆ. ಈ ಕಾರಣದಿಂದಲೇ ದರ್ಶನ್ ಜೊತೆ ಅನೇಕರು ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಯಿತು. ಅವರ ಖೈದಿ ಸಂಖ್ಯೆಯನ್ನು ಕೆಲವರು ಹಚ್ಚೆ ಹಾಕಿಸಿಕೊಂಡರೆ ಇನ್ನೂ ಕೆಲವರು ತಮ್ಮ ವಾಹನಗಳಿಗೆ ಈ ನಂಬರ್​ನ ಸ್ಟಿಕ್ಕರ್ ಅಂಟಿಸಿದರು. ಅತ್ತ ಮಗನಿಗೆ ಖೈದಿ ಡ್ರೆಸ್ ಹಾಕಿಸಿ ಫೋಟೋಶೂಟ್ ಮಾಡಿಸೋ ಕೆಲಸವೂ ಆಯಿತು. ಈಗ ದರ್ಶನ್ ಫ್ಯಾನ್ಸ್ ಆರೋಪಿ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ ಬದಲಾವಣೆ ಪಕ್ಕಾ ಆಗಿದೆ.

ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ. ಮೂರು ಅಂಕಿಯ ವಿಚಾರಣಾಧೀನ ನಂಬರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಬ್ಯಾರಕ್​​ಗೆ ಶಿಫ್ಟ್​​​ ಮಾಡಲಾಗುತ್ತದೆ.

ಇದನ್ನೂ ಓದಿ: ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ

ದರ್ಶನ್ ಅವರನ್ನು ನೋಡಲು ಈಗಲೇ ಬಳ್ಳಾರಿಯ ಕೇಂದ್ರ ಕಾರಾಗೃಹದ ಬಳಿ ಫ್ಯಾನ್ಸ್ ನೆರೆದಿದ್ದಾರೆ. ಜೈಲಿನಲ್ಲಿ ಸಿಗರೇಟ್ ಸೇದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಇಂದು (ಆಗಸ್ಟ್​ 28) ವಿಚಾರಣೆ ಮಾಡಬೇಕಿದೆ. ಆ ಬಳಿಕ ಸ್ಥಳಮಹಜರು ನಡೆಯಲಿದೆ. ಇದಾದ ಬಳಿಕ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Wed, 28 August 24

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ