ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?

ಕೊಲೆ ಆರೋಪಿ ನಟ ದರ್ಶನ್​​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ.

ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 03, 2024 | 3:05 PM

ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ವಿಚಾರಣಾಧೀನ ಖೈದಿ ನಂ. 6106 ನೀಡಲಾಗಿತ್ತು. ಇದನ್ನು ಫ್ಯಾನ್ಸ್ ಸಂಭ್ರಮಿಸಿ ಹಚ್ಚೆ ಹಾಕಿಸಿಕೊಂಡಿದ್ದರು. ಕೆಲವರು ಕಾರುಗಳಿಗೆ ಈ ಸಂಖ್ಯೆಯನ್ನು ಬರೆದುಕೊಂಡಿದ್ದರು. ಈಗ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್​ ಆಗಲಿದ್ದಾರೆ. ಇದರಿಂದ ಅವರು ವಿಚಾರಣಾಧೀನ ಖೈದಿ ಸಂಖ್ಯೆ ಕೂಡ ಬದಲಾಗಲಿದೆ. ಈಗ ದರ್ಶನ್ ಫ್ಯಾನ್ಸ್ ಮತ್ತೆ ಹಚ್ಚೆ ಹಾಕಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಫ್ಯಾನ್ಸ್ ದರ್ಶನ್​ನ ಮೇಲೆ ಅಂಧಾಭಿಮಾನ ತೋರಿಸುತ್ತಿದ್ದಾರೆ. ಈ ಕಾರಣದಿಂದಲೇ ದರ್ಶನ್ ಜೊತೆ ಅನೇಕರು ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಯಿತು. ಅವರ ಖೈದಿ ಸಂಖ್ಯೆಯನ್ನು ಕೆಲವರು ಹಚ್ಚೆ ಹಾಕಿಸಿಕೊಂಡರೆ ಇನ್ನೂ ಕೆಲವರು ತಮ್ಮ ವಾಹನಗಳಿಗೆ ಈ ನಂಬರ್​ನ ಸ್ಟಿಕ್ಕರ್ ಅಂಟಿಸಿದರು. ಅತ್ತ ಮಗನಿಗೆ ಖೈದಿ ಡ್ರೆಸ್ ಹಾಕಿಸಿ ಫೋಟೋಶೂಟ್ ಮಾಡಿಸೋ ಕೆಲಸವೂ ಆಯಿತು. ಈಗ ದರ್ಶನ್ ಫ್ಯಾನ್ಸ್ ಆರೋಪಿ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ ಬದಲಾವಣೆ ಪಕ್ಕಾ ಆಗಿದೆ.

ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ. ಮೂರು ಅಂಕಿಯ ವಿಚಾರಣಾಧೀನ ನಂಬರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಬ್ಯಾರಕ್​​ಗೆ ಶಿಫ್ಟ್​​​ ಮಾಡಲಾಗುತ್ತದೆ.

ಇದನ್ನೂ ಓದಿ: ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ

ದರ್ಶನ್ ಅವರನ್ನು ನೋಡಲು ಈಗಲೇ ಬಳ್ಳಾರಿಯ ಕೇಂದ್ರ ಕಾರಾಗೃಹದ ಬಳಿ ಫ್ಯಾನ್ಸ್ ನೆರೆದಿದ್ದಾರೆ. ಜೈಲಿನಲ್ಲಿ ಸಿಗರೇಟ್ ಸೇದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಇಂದು (ಆಗಸ್ಟ್​ 28) ವಿಚಾರಣೆ ಮಾಡಬೇಕಿದೆ. ಆ ಬಳಿಕ ಸ್ಥಳಮಹಜರು ನಡೆಯಲಿದೆ. ಇದಾದ ಬಳಿಕ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Wed, 28 August 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ